ರಾಜ್ಯ

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ಕಾನೂನು ರೀತಿ ಹೋರಾಟ ನಡೆಸಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ವಿರೋಧಿಸಿ ರೈತರು ನಿರಂತರ ಹೋರಾಟ ಮಾಡುತ್ತಿದ್ದಾರೆ. ರೈತರ ಪರವಾಗಿ ನ್ಯಾಯಾಲಯದಲ್ಲಿ ಹೋರಾಟ ನಡೆಸಲಾಗುವುದು. ಈ ಯೋಜನೆಯಲ್ಲಿ ನಾಡಿನ ಹಿತಾಸಕ್ತಿಗಿಂತ ರಿಯಲ್ ಎಸ್ಟೇಟ್‌ಗೆ ಅನುಕೂಲ ಮಾಡಿಕೊಟ್ಟು, ದುಡ್ಡು ಹೊಡೆಯುವ ಉದ್ದೇಶ ಅಡಗಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಬೆಂಗಳೂರಿನ ಒತ್ತಡ ಕಡಿಮೆ ಮಾಡಲು ಟೌನ್‌ಶಿಪ್ ಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ಬೆಂಗಳೂರಿನ ಸಮಸ್ಯೆ ಬಗೆಹರಿಸುವ ದಿಕ್ಕಿನಲ್ಲಿ ಸ್ಪಷ್ಟ ಕಾರ್ಯಕ್ರಮ ಅನುಷ್ಠಾನಗೊಳಿಸಿಲ್ಲ. ಬಿಡದಿ ಟೌನ್‌ಶಿಪ್ ಕುಮಾರಸ್ವಾಮಿ ಅವರ ಕೂಸು ಎನ್ನುತ್ತಾರೆ. ೨೦೦೬ರಲ್ಲಿ ಐದು ಟೌನ್‌ಶಿಪ್ ಮಾಡಲು ಹೊರಟಾಗ ಕಾಂಗ್ರೆಸ್‌ನವರು ತೀವ್ರ ವಿರೋಧ ವ್ಯಕ್ತಪಡಿಸಿ ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಈಗ ಏಕೆ ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಅರ್ಕಾವತಿ ಬಡಾವಣೆ ವಿಚಾರದಲ್ಲಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ೨೦ ವರ್ಷಗಳ ಹಿಂದಿನ ಯೋಜನೆ ಈಗ ಅನುಷ್ಠಾನಗೊಳಿಸುವ ಅಗತ್ಯವೇನು? ತೆಂಗು, ಬಾಳೆ, ಅಡಿಕೆ ಬೆಳೆಗಳಲ್ಲದೆ, ಆರು ಲಕ್ಷ ಲೀಟರ್ ನಿತ್ಯ ಹಾಲು ಉತ್ಪಾದನೆ ಆಗುತ್ತಿದೆ. ರೈತರನ್ನು ಒಕ್ಕಲೆಬ್ಬಿಸಿ ಇಂತಹ ಕಡೆ ಟೌನ್‌ಶಿಪ್ ಮಾಡುತ್ತಿರುವುದು ಸರಿಯಲ್ಲ. ಇದನ್ನು ಯಾರೂ ಮೆಚ್ಚುವುದಿಲ್ಲ. ಗುಜರಾತಿನಲ್ಲಿ ಭೂ ಕಂಪನವಾದ ನಂತರ ಬೆಳೆ ಬೆಳೆಯಲಾಗದ ಬರಡು ಭೂಮಿಯಲ್ಲಿ ಟೌನ್‌ಶಿಪ್ ಮಾಡಲಾಗಿದೆ. ಆದರೆ, ಇಲ್ಲಿ ಫಲವತ್ತಾದ ಭೂಮಿ ಇದೆ ಎಂದು ಅವರು ಹೇಳಿದರು.

ಈಗಿನ ಮುಖ್ಯಮಂತ್ರಿ ಬಿಎಂಐಸಿಪಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಒಂದು ಲಕ್ಷ ಎಕರೆ ಸ್ವಾಧೀನ ಮಾಡಲಾಗಿದೆ. ಅದರಿಂದ ರೈತರಿಗಾಗಿರುವ ತೊಂದರೆ ಗೊತ್ತಿಲ್ಲವೆ? ಈಗಲೂ ಅವರೇ ಜಿಬಿಎ ಅಧ್ಯಕ್ಷರು ಎಂದು ಅವರು ಟೀಕಿಸಿದರು.

 

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 mins ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

1 hour ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

3 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

6 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

7 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

7 hours ago