Mysore
20
clear sky

Social Media

ಶುಕ್ರವಾರ, 13 ಮಾರ್ಚ್ 2026
Light
Dark

ದರ್ಶನ್‌ ಕ್ವಾರಂಟೈನ್‌ ಸೆಲ್‌ ಬಗ್ಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೋರ್ಟ್‌ಗೆ ವರದಿ ಸಲ್ಲಿಕೆ

Darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್‌ ಕ್ಯಾರಂಟೈನ್‌ ಸೆಲ್‌ ಬಗ್ಗೆ ಕಾನೂನು ಸೇವೆಗಳ ಪ್ರಾಧಿಕಾರ ಕೋರ್ಟ್‌ಗೆ ವರದಿ ಸಲ್ಲಿಸಿದೆ.

ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್‌ಗೆ ಕಾನೂನು ಸೇವೆಗಳ ಪ್ರಾಧಿಕಾರ ವರದಿ ಸಲ್ಲಿಸಿದೆ. ನಟ ದರ್ಶನ್‌ಗೆ ಬೆನ್ನು ನೋವಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿ ಕೆಲ ಸೌಲಭ್ಯಗಳನ್ನು ಒದಗಿಸುವಂತೆ ಕೋರ್ಟ್‌ ಆದೇಶ ನೀಡಿತ್ತು.

ಕೋರ್ಟ್‌ ಆದೇಶ ನೀಡಿದರೂ ಜೈಲಾಧಿಕಾರಿಗಳು ಹೆಚ್ಚುವರಿ ಹಾಸಿಗೆ, ದಿಂಬು ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಒದಗಿಸಿಕೊಟ್ಟಿಲ್ಲ ಎಂದು ದರ್ಶನ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಜೈಲಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.

ಇದೀಗ ಕಾನೂನು ಸೇವೆಗಳ ಪ್ರಾಧಿಕಾರ ದರ್ಶನ್‌ ಇರುವ ಕ್ವಾರಂಟೈನ್‌ ಸೆಲ್‌ಗೆ ಭೇಟಿ ನೀಡಿ ಪರಿಶೀಲಿಸಿ ವರದಿಯನ್ನು ಸಲ್ಲಿಸಿದೆ. ದರ್ಶನ್‌ಗೆ ಬೆನ್ನು ನೋವಿದ್ದ ಕಾರಣ ವೈದ್ಯರನ್ನು ಕರೆಸಿ ಸಲಹೆಯನ್ನು ಪಡೆಯಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ವರದಿ ಸಲ್ಲಿಕೆ ವೇಳೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನಟ ದರ್ಶನ್‌ ಕೂಡ ಕೋರ್ಟ್‌ಗೆ ಹಾಜರಾಗಿದ್ದರು. ವರದಿ ಸ್ವೀಕರಿಸುವ ನ್ಯಾಯಾಲಯ ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್.‌29ಕ್ಕೆ ಮುಂದೂಡಿದೆ.

Tags:
error: Content is protected !!