ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ನಾಳೆಯಿಂದ ಆಗಸ್ಟ್.22ರವರೆಗೆ ಅಧಿವೇಶನ ನಡೆಯಲಿದುದ, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ.
ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಿದ್ದು, ಇದೆಲ್ಲವನ್ನು ಎದುರಿಸಲು ಆಡಳಿತ ಪಕ್ಷ ಕೂಡ ತಯಾರಿ ನಡೆಸಿದೆ. ಆರರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ, ಅತಿವೃಷ್ಟಿ, ಅನಾವೃಷ್ಟಿ, ಪ್ರವಾಹ, ರಸಗೊಬ್ಬರದ ಅಭಾವ, ಒಳ ಮೀಸಲಾತಿ, ಮತಗಳ್ಳತನದ ಆರೋಪ ಸೇರಿದಂತೆ ಹಲವು ವಿಚಾರಗಳು ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಸದನ ಆರಂಬವಾಗಲಿದ್ದು, ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಸಲ್ಲಿಸಲಾಗುತ್ತದೆ. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತುಗೊಳಿಸಲಾಗಿತ್ತು. ಈ ನಿರ್ಣಯವನ್ನು ಮೇ 25 ರಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿತ್ತು. ಈ ಕುರಿತಾದ ಸ್ಥಿರೀಕರಣ ಪ್ರಸ್ತಾವ ಮೊದಲ ದಿನವೇ ಮಂಡನೆಯಾಗಲಿದ್ದು, ವಿಧಾನಸಭೆ ಅನುಮೋದನೆ ನೀಡಬೇಕಿದೆ.
ಉಳಿದಂತೆ ಪ್ರಶ್ನೋತ್ತರ ಗಮನ ಸೆಳೆಯುವ ಸೂಚನೆಗಳು, ಕಾಗದ ಪತ್ರಗಳ ಮಂಡನೆ ಸೇರಿದಂತೆ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು ಜರುಗಲಿವೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…