ರಾಜ್ಯ

ನಾಳೆಯಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ: ಸರ್ಕಾರದ ವಿರುದ್ಧ ವಿಪಕ್ಷಗಳ ರಣಕಹಳೆ

ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ನಾಳೆಯಿಂದ ಆಗಸ್ಟ್.‌22ರವರೆಗೆ ಅಧಿವೇಶನ ನಡೆಯಲಿದುದ, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ.

ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಿದ್ದು, ಇದೆಲ್ಲವನ್ನು ಎದುರಿಸಲು ಆಡಳಿತ ಪಕ್ಷ ಕೂಡ ತಯಾರಿ ನಡೆಸಿದೆ. ಆರರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ, ಅತಿವೃಷ್ಟಿ, ಅನಾವೃಷ್ಟಿ, ಪ್ರವಾಹ, ರಸಗೊಬ್ಬರದ ಅಭಾವ, ಒಳ ಮೀಸಲಾತಿ, ಮತಗಳ್ಳತನದ ಆರೋಪ ಸೇರಿದಂತೆ ಹಲವು ವಿಚಾರಗಳು ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಸದನ ಆರಂಬವಾಗಲಿದ್ದು, ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಸಲ್ಲಿಸಲಾಗುತ್ತದೆ. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತುಗೊಳಿಸಲಾಗಿತ್ತು. ಈ ನಿರ್ಣಯವನ್ನು ಮೇ 25 ರಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿತ್ತು. ಈ ಕುರಿತಾದ ಸ್ಥಿರೀಕರಣ ಪ್ರಸ್ತಾವ ಮೊದಲ ದಿನವೇ ಮಂಡನೆಯಾಗಲಿದ್ದು, ವಿಧಾನಸಭೆ ಅನುಮೋದನೆ ನೀಡಬೇಕಿದೆ.

ಉಳಿದಂತೆ ಪ್ರಶ್ನೋತ್ತರ ಗಮನ ಸೆಳೆಯುವ ಸೂಚನೆಗಳು, ಕಾಗದ ಪತ್ರಗಳ ಮಂಡನೆ ಸೇರಿದಂತೆ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು ಜರುಗಲಿವೆ.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

3 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

4 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

4 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

4 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

4 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

5 hours ago