Siddaramaiah. Photo: PTI
ಬೆಂಗಳೂರು : ವಿಧಾನಮಂಡಲ ಬಜೆಟ್ ಅಧಿವೇಶನ ಇಂದಿನಿಂದ (ಸೋಮವಾರ) ಆರಂಭವಾಗುತ್ತಿದೆ. ಫೆಬ್ರವರಿ 23ರವರೆಗೂ ಈ ಅಧಿವೇಶನ ನಡೆಯಲಿದೆ. ಆರೋಪ ಪ್ರತ್ಯಾರೋಪಕ್ಕೆ ಆಡಳಿತ ಮತ್ತು ಪ್ರತಿಪಕ್ಷಗಳು ಸಜ್ಜಾಗಿವೆ.
ಬಜೆಟ್ ಅಧಿವೇಶನ ಆಗಿರುವುದರಿಂದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ. ಇತ್ತೀಚಿಗಷ್ಟೆ ಕೇಂದ್ರದ ಬಜೆಟ್ ಮಂಡನೆಯಾಗಿದೆ. ಅನುದಾನ ತಾರತಮ್ಯ ವಿಚಾರಕ್ಕೆ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ್ದರು. ಕೇಂದ್ರ ಸರ್ಕಾರ ರಾಜ್ಯದ ತೆರಿಗೆ ಪಾಲು ನೀಡಿಲ್ಲ ಎಂದು ಕೈ ನಾಯಕರು ದಿಲ್ಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ತೆರಿಗೆ ವಿಚಾರಕ್ಕೆ ವಾಗ್ಯುದ್ಧ ಮುಂದುವರಿದಿರುವ ಬೆನ್ನಲ್ಲೇ ರಾಜ್ಯದಲ್ಲಿ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಇದರೊಂದಿಗೆ ಮತ್ತೊಂದು ಸುತ್ತಿನ ಸಮರಕ್ಕೆ ವೇದಿಕೆ ಸಜ್ಜಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಹೊಸ ಸರ್ಕಾರ ಬಂದಾಗಿನಿಂದ ಇಲ್ಲಿಯವರೆಗೆ ಆಗಿರುವ ಪ್ರಗತಿ, ಗ್ಯಾರಂಟಿ ಅನುಷ್ಠಾನ ಹಾಗೂ ಮುನ್ನೋಟವನ್ನು ನೀಡಲಿದ್ದಾರೆ.
ಮಂಗಳವಾರದಿಂದ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಆರಂಭವಾಗಲಿದೆ. ಭಾಷಣದ ಚೌಕಟ್ಟು ಹೊರತಾಗಿ ಹಲವು ವಿಷಯಗಳು ಪ್ರಸ್ತಾಪವಾಗುವ ಸಾಧ್ಯತೆ ಇದೆ. ಆಡಳಿತ, ವಿಪಕ್ಷಗಳ ಆರೋಪ, ಪ್ರತ್ಯಾರೋಪಕ್ಕೆ ಸದನ ಸಾಕ್ಷಿಯಾಗಲಿದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಹತ್ತಾರು ವಿಷಯ ಇಟ್ಟುಕೊಂಡ ಪ್ರತಿಪಕ್ಷಗಳು ಮುಗಿಬೀಳಲು ಸಜ್ಜಾಗಿವೆ.
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…