Categories: ರಾಜ್ಯ

ಬೆಂಗಳೂರಿನಲ್ಲಿ ಬೋನಿಗೆ ಬಿದ್ದ ನರಭಕ್ಷಕ ಚಿರತೆ

ಬೆಂಗಳೂರು: ಮಹಿಳೆಯೋರ್ವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆ ಬೋನಿಗೆ ಬಿದ್ದಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಸತತ ಒಂದು ವಾರದ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ವಾರ ಮಹಿಳೆಯೋರ್ವರನ್ನು ಬಲಿ ಪಡೆದಿದ್ದ ಚಿರತೆ, ಆಗಾಗ್ಗೆ ಸ್ಥಳೀಯರಿಗೆ ಕಾಣಿಸಿಕೊಳ್ಳುತ್ತಿತ್ತು.

ಈ ಹಿನ್ನೆಲೆಯಲ್ಲಿ ಸ್ಥಳೀಯರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಅಳವಡಿಸಿದ್ದರು. ಈ ಬೋನಿಗೆ ಚಿರತೆ ಸೆರೆಯಾಗಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಆದರೆ ಮಹಿಳೆ ಬಲಿ ಪಡೆದಿದ್ದು ಈ ಚಿರತೆನಾ ಎಂಬುದು ಇನ್ನೂ ತಿಳಿದು ಬಂದಿಲ್ಲ. ಡಿಎನ್‌ಎ ಪರೀಕ್ಷೆಯ ಬಳಿಕ ಈ ಬಗ್ಗೆ ದೃಢವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನೆಲಮಂಗಲ ತಾಲ್ಲೂಕಿನ ಗೊಲ್ಲರಹಟ್ಟಿಯಲ್ಲಿ ಕರಿಯಮ್ಮ ಎಂಬುವವರ ಮೇಳೆ ಚಿರತೆ ದಾಳಿ ನಡೆಸಿ ಕೊಂದುಹಾಕಿತ್ತು. ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿತ್ತು. ಬಳಿಕ ರುಂಡ ಮುಂಡ ಪ್ರತ್ಯೇಕವಾದ ಸ್ಥಿತಿಯಲ್ಲಿ ಕರಿಯಮ್ಮನ ಶವ ಪತ್ತೆಯಾಗಿತ್ತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

57 mins ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

2 hours ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

4 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

4 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

5 hours ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

5 hours ago