Categories: ರಾಜ್ಯ

ಬೆಂಗಳೂರಿನಲ್ಲಿ ಬೋನಿಗೆ ಬಿದ್ದ ನರಭಕ್ಷಕ ಚಿರತೆ

ಬೆಂಗಳೂರು: ಮಹಿಳೆಯೋರ್ವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆ ಬೋನಿಗೆ ಬಿದ್ದಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಸತತ ಒಂದು ವಾರದ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ವಾರ ಮಹಿಳೆಯೋರ್ವರನ್ನು ಬಲಿ ಪಡೆದಿದ್ದ ಚಿರತೆ, ಆಗಾಗ್ಗೆ ಸ್ಥಳೀಯರಿಗೆ ಕಾಣಿಸಿಕೊಳ್ಳುತ್ತಿತ್ತು.

ಈ ಹಿನ್ನೆಲೆಯಲ್ಲಿ ಸ್ಥಳೀಯರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಅಳವಡಿಸಿದ್ದರು. ಈ ಬೋನಿಗೆ ಚಿರತೆ ಸೆರೆಯಾಗಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಆದರೆ ಮಹಿಳೆ ಬಲಿ ಪಡೆದಿದ್ದು ಈ ಚಿರತೆನಾ ಎಂಬುದು ಇನ್ನೂ ತಿಳಿದು ಬಂದಿಲ್ಲ. ಡಿಎನ್‌ಎ ಪರೀಕ್ಷೆಯ ಬಳಿಕ ಈ ಬಗ್ಗೆ ದೃಢವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನೆಲಮಂಗಲ ತಾಲ್ಲೂಕಿನ ಗೊಲ್ಲರಹಟ್ಟಿಯಲ್ಲಿ ಕರಿಯಮ್ಮ ಎಂಬುವವರ ಮೇಳೆ ಚಿರತೆ ದಾಳಿ ನಡೆಸಿ ಕೊಂದುಹಾಕಿತ್ತು. ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿತ್ತು. ಬಳಿಕ ರುಂಡ ಮುಂಡ ಪ್ರತ್ಯೇಕವಾದ ಸ್ಥಿತಿಯಲ್ಲಿ ಕರಿಯಮ್ಮನ ಶವ ಪತ್ತೆಯಾಗಿತ್ತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನನಗೆ ಎಲ್ಲಾ ದಿನಗಳು ಒಂದೆ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇವೆ : ಮುಖ್ಯಮಂತ್ರಿ

ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…

13 mins ago

ಮಡಿಕೇರಿಯಲ್ಲಿ ಹುಲಿ ಪ್ರತ್ಯಕ್ಷ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…

18 mins ago

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…

1 hour ago

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

2 hours ago

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

2 hours ago

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

3 hours ago