ರಾಜ್ಯ

ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ವಹಿಸಿ, ಸಿಎಂ ರಾಜೀನಾಮೆ ನೀಡಲಿ: ಆರ್‌.ಅಶೋಕ

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಸರ್ಕಾರದ ಮೇಲೆ 40% ಕಮಿಶನ್‌ನ ಗುರುತರ ಆರೋಪ ಮಾಡಿದ್ದಾರೆ. ಕಮಿಶನ್‌ ಕೊಡುವವರಿಗೆ ಬಿಲ್‌ ಪಾವತಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ಬಂದ ಆರಂಭದಿಂದಲೇ ಕಮಿಶನ್‌ ದಂಧೆ ಹಾಗೂ ಲೂಟಿ ನಡೆಯುತ್ತಿದೆ ಎಂದು ನಾವು ಕೂಡ ತಿಳಿಸಿದ್ದೆವು. ಲಂಚ ಕೊಡುತ್ತಿರುವವರ ಸಂಘದವರೇ ಹೇಳಿರುವುದರಿಂದ ಇದು ಲೂಟಿಕೋರ ಸರ್ಕಾರ, 75 ಪರ್ಸೆಂಟ್‌ ಸರ್ಕಾರ ಎಂಬುದು ಕಂಡುಬಂದಿದೆ. ತೆರಿಗೆ ಅಧಿಕಾರಿಗಳು ದಾಳಿ ಮಾಡಿದಾಗಲೂ ಕಾಂಗ್ರೆಸ್ ಬೆಂಬಲಿಗರ ಮನೆಗಳಲ್ಲಿ ಎರಡು ಕಡೆ ಐವತ್ತು- ಐವತ್ತು ಕೋಟಿ ಹಣ ಸಿಕ್ಕಿದೆ. ಇದು ಲೂಟಿ ಹೊಡೆದ ಹಣ ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷ್ಯ ಬೇಕು ಎಂದು ಪ್ರಶ್ನಿಸಿದರು. ಈ ಹಿಂದೆ ಐದು ರಾಜ್ಯಗಳ ಚುನಾವಣೆಗಾಗಿ ಲೂಟಿ ನಡೆಯಿತು. ಈಗ ಮುಂದೆ ಬರುವ ಲೋಕಸಭಾ ಚುನಾವಣೆಗೆ ಎತ್ತುವಳಿ ನಡೆಯುತ್ತಿದೆ. ಎಲ್ಲವನ್ನೂ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಮುಂದೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಯಾರ ಮುಖದ ಮೇಲೆ ಅಂಟಿಸಿಕೊಳ್ಳುತ್ತಾರೆ: ಇದೇ ಕೆಂಪಣ್ಣ ನಮ್ಮ ಸರಕಾರದ ಅವಧಿಯಲ್ಲಿ ಆರೋಪ ಮಾಡಿದಾಗ ಸಿಎಂ ಸಿದ್ದರಾಮಯ್ಯನವರು ಪೇಸಿಎಂ ಎಂಬ ಪೋಸ್ಟರ್‌ ಅಂಟಿಸಿದ್ದರು. ಈಗ ಯಾರ ಮುಖದ ಮೇಲೆ ಯಾವ ಪೋಸ್ಟರ್‌ ಅಂಟಿಸಿಕೊಳ್ಳುತ್ತಾರೆ? ಪೇ ಸಿದ್ದರಾಮಯ್ಯ, ಎಟಿಎಂ ಸಿದ್ದರಾಮಯ್ಯ ಎಂದು ಅಂಟಿಸಿಕೊಳ್ಳುತ್ತಾರಾ? ಎಂದು ಪ್ರಶ್ನಿಸಿದರು.

ಮಾಡುವುದು ಅನಾಚಾರ ಮನೆ ಮುಂದೆ ಬೃಂದಾವನ ಎನ್ನುವ ಸ್ಥಿತಿ ಸಿಎಂ ಸಿದ್ದರಾಮಯ್ಯನವರದ್ದು. ಅಂದು ರೋಷಾವೇಶದಿಂದ ಮಾತನಾಡುತ್ತಿದ್ದ ಅವರು ಈಗ ಎರಡು ನಾಲಿಗೆಯನ್ನು ತೋರಿಸಿದ್ದಾರೆ. ಲೋಕಸಭಾ ಚುನಾವಣೆಗಾಗಿ ಲೂಟಿ ಮಾಡುತ್ತಿದ್ದು, ಎಂಟೇ ತಿಂಗಳಲ್ಲಿ ಸರ್ಕಾರಕ್ಕೆ ಭ್ರಷ್ಟಾಚಾರದ ಆರೋಪ ಬಂದಿದೆ. ಇನ್ನು ಸಿದ್ದರಾಮಯ್ಯನವರು ಒಂದು ನಿಮಿಷವೂ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರದೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ವಹಿಸಿದರೆ ಕೂಡಲೇ ನಮ್ಮ ಬಳಿ ಇರುವ ದಾಖಲೆಗಳನ್ನು ನೀಡುತ್ತೇವೆ. ಇವರು ಪ್ರಾಮಾಣಿಕರೇ ಆಗಿದ್ದರೆ, ನಯಾ ಪೈಸೆಯೂ ಭ್ರಷ್ಟಾಚಾರ ಆಗಿಲ್ಲ ಎನ್ನುವವರಾದರೆ ಸಿಬಿಐ ತನಿಖೆಗೆ ನೀಡಲಿ. ಕೆಂಪಣ್ಣ ಅವರು ಆರೋಪ ಮಾಡಿದ ಎಲ್ಲವನ್ನೂ ತನಿಖೆಗೆ ನೀಡಲಿ ಎಂದು ಸವಾಲು ಹಾಕಿದರು.

ಸರ್ಕಾರ ಮಾಡುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸದನದಲ್ಲಿ ಪ್ರಸ್ತಾಪಿಸಲಾಗುವುದು. ಸರ್ಕಾರವನ್ನು ತೊಲಗಿಸಲು ಹೋರಾಟ ಮಾಡಲಾಗುವುದು. ಡೆವಲಪರ್‌ಗಳು, ಗುತ್ತಿಗೆದಾರರ ಪ್ರಕಾರ, ಯಾರೇ ಕಟ್ಟಡ ನಿರ್ಮಿಸಿದರೂ ಚದರ ಅಡಿಗೆ 75 ರೂ. ಕಮಿಶನ್‌ ನಿಗದಿಪಡಿಸಲಾಗಿದೆ. ಇದನ್ನು ಯಾರೇ ಮಾಡಿದ್ದರೂ ತಪ್ಪು ಎಂದರು.

ಹಕ್ಕುಚ್ಯುತಿ ಮಂಡಿಸಲಿ: ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶ್ವೇತಪತ್ರವನ್ನು ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಅದರಲ್ಲಿ ತಪ್ಪಿದ್ದರೆ, ಏನಾದರೂ ಅನುಮಾನಗಳಿದ್ದಲ್ಲಿ ಹಕ್ಕುಚ್ಯುತಿ ಮಂಡಿಸಲು ಅವಕಾಶವಿದೆ. ಧಮ್‌ ಇದ್ದರೆ ಕಾಂಗ್ರೆಸ್‌ ನಾಯಕರು ಹಕ್ಕುಚ್ಯುತಿ ಮಂಡಿಸಲಿ ಎಂದು ಸವಾಲೆಸೆದರು.

ಎಸ್‌ಡಿಪಿಐ ಅಧ್ಯಕ್ಷರ ಹೇಳಿಕೆ ದೇಶದ್ರೋಹದ ಹೇಳಿಕೆ. ಪಿಎಫ್‌ಐ, ಕೆಎಫ್‌ಡಿ ಸಂಘಟನೆಗಳ ಅಂಗಸಂಸ್ಥೆಯೇ ಎಸ್‌ಡಿಪಿಐ. ಅಲ್ಲಿ ಇದ್ದವರೇ ಇಲ್ಲಿ ಬಂದು ಸೇರಿಕೊಂಡಿದ್ದಾರೆ. ಕೋರ್ಟ್‌ ಆದೇಶದ ಪ್ರಕಾರ ಜ್ಞಾನವಾಪಿಯಲ್ಲಿ ಶಿವನ ಪೂಜೆಗೆ ಅವಕಾಶ ಸಿಕ್ಕಿದೆ. ಜ್ಞಾನವಾಪಿ ಹಿಂದೂ ಮಂದಿರ ಎನ್ನುವುದು ಜಗತ್ತಿಗೇ ಗೊತ್ತಿದೆ. ಇದು ತಪ್ಪು ಎಂದಾದರೆ ಸುಪ್ರೀಂ ಕೋರ್ಟ್‌ಗೆ ಹೋಗಲಿ. ಪುರಾತತ್ವ ಇಲಾಖೆಯವರು ಎಲ್ಲವನ್ನೂ ಸಮೀಕ್ಷೆ ಮಾಡಲಿ. ಮಂದಿರಗಳನ್ನು ಮರಳಿ ಹಿಂದೂಗಳಿಗೆ ನೀಡಬೇಕೆನ್ನುವುದು ಬಿಜೆಪಿ ನಿಲುವು. ಅದನ್ನು ಕಾನೂನು ಪ್ರಕಾರವೇ ಮಾಡಲಾಗುವುದು ಎಂದರು.

andolanait

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

1 hour ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

2 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

2 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

2 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

2 hours ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

4 hours ago