ಎರಡೂ ಕೋರ್ಟ್ಗಳು ತನಿಖೆಯಾಗಬೇಕು ಎಂದು ಅಭಿಪ್ರಾಯಪಟ್ಟಿವೆ, ಮುಖ್ಯಮಂತ್ರಿಗೆ ಬೇರೆ ದಾರಿ ಇಲ್ಲ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಬಂದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು. ಅಥವಾ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದ ಕೂಡಲೇ ರಾಜೀನಾಮೆ ಕೊಡಬೇಕಿತ್ತು. ಎಫ್ಐಆರ್ ಆದ ಬಳಿಕ ಪೊಲೀಸರ ಮುಂದೆ ನಿಲ್ಲಲು ಸಿದ್ದರಾಮಯ್ಯಗೆ ಸಾಧ್ಯವೇ ಇಲ್ಲ. ಕಪ್ಪು ಚುಕ್ಕೆ ಇಲ್ಲ, ನಾನು ಸಜ್ಜನ, ಮಾದರಿ ಎಂದು ಅವರು ಹೇಳಿಕೊಳ್ಳುತ್ತಾರೆ. ಈ ಅವಕಾಶ ಅವರಿಗೆ ಬಂದಿದೆ. ಕೂಡಲೇ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿ ರಾಜ್ಯಕ್ಕೆ ಮಾದರಿಯಾಗಲಿ ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದರ ಜೊತೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತನಿಖೆಗೆ ಲೋಕಾಯುಕ್ತಕ್ಕೆ ಆದೇಶಿಸಲಾಗಿದೆ. ಬಿಜೆಪಿಯಿಂದ ಸದನದಲ್ಲಿ ಈ ಕುರಿತು ಹೋರಾಟ ಮಾಡಿದಾಗ, ಇದು ಬಿಜೆಪಿ ಪ್ರೇರಿತ, ಇದು ಷಡ್ಯಂತ್ರ ಎಂದು ಸಚಿವರು ಆರೋಪ ಮಾಡಿದ್ದರು. ರಾಜಭವನಕ್ಕೆ ಮುತ್ತಿಗೆ ಹಾಕಿದ ಶಾಸಕರು, ಬಾಂಗ್ಲಾ ಮಾದರಿ ಹೋರಾಟ ಮಾಡುತ್ತೇವೆಂದು ಬೆದರಿಕೆ ಹಾಕಿದ್ದರು. ಈಗ ಇದು ತನಿಖೆಗೆ ಸೂಕ್ತ ಎಂದು ನ್ಯಾಯಾಂಗದಿಂದಲೇ ತಿಳಿದುಬಂದಿದೆ. ಅದಕ್ಕೆ ಸ್ಪಷ್ಟವಾದ ಕಾರಣವನ್ನೂ ನ್ಯಾಯಾಲಯ ಹೇಳಿದೆ ಎಂದರು.
ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೇರೆ ದಾರಿಯಿಲ್ಲ. ಅವರು ಯಾವುದಕ್ಕೆ ಕಾಯುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ. ಬಿಜೆಪಿಯವರು ಪ್ರಕರಣ ದಾಖಲಿಸಿಲ್ಲ. ದೂರು ದಾಖಲಿಸಿದ್ದು ಆರ್ಟಿಐ ಕಾರ್ಯಕರ್ತರು ಹಾಗೂ ಹೋರಾಟಗಾರರು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಆಪಾದನೆ ಮಾಡಿದ್ದರು. ಈಗ ನ್ಯಾಯಾಲಯಕ್ಕೆ ಯಾವ ರೀತಿಯ ಆಪಾದನೆ ಮಾಡುತ್ತಾರೆ? ಎಂದು ಪ್ರಶ್ನೆ ಮಾಡಿದರು.
ಎರಡೂ ಕೋರ್ಟ್ಗಳಲ್ಲಿ ಅವರಿಗೆ ಹಿನ್ನಡೆಯಾಗಿದೆ. ಮೇಲಿನ ಕೋರ್ಟ್ಗೆ ಹೋಗುವ ಅವಕಾಶ ಇದ್ದೇ ಇದೆ. ಬಿಜೆಪಿ ಏನೂ ಹೇಳಿಲ್ಲ, ಎಲ್ಲವನ್ನೂ ಕೋರ್ಟ್ ಹೇಳಿದೆ. ಲೋಕಾಯುಕ್ತ ತನಿಖೆಗೆ ವಹಿಸಿರುವುದರಿಂದ ಎಫ್ಐಆರ್ ಆಗಲಿದೆ. ಲೋಕಾಯುಕ್ತ ಸ್ವತಂತ್ರ ಸಂಸ್ಥೆಯಾದರೂ ಪೊಲೀಸರು, ಪೊಲೀಸ್ ಇಲಾಖೆಯಡಿಯಲ್ಲೇ ಬರುತ್ತಾರೆ ಎಂದರು.
ಪ್ರತಿಭಟನೆ
ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಒತ್ತಾಯಿಸಿದ್ದೇವೆ. ಪಕ್ಷದ ಎಲ್ಲ ಮುಖಂಡರು ಸೇರಿ ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟಿಸಲಿದ್ದೇವೆ ಎಂದು ಆರ್.ಅಶೋಕ ತಿಳಿಸಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…