ರಾಜ್ಯ

ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ: ಆರ್‌.ಅಶೋಕ ಆಗ್ರಹ

ಎರಡೂ ಕೋರ್ಟ್‌ಗಳು ತನಿಖೆಯಾಗಬೇಕು ಎಂದು ಅಭಿಪ್ರಾಯಪಟ್ಟಿವೆ, ಮುಖ್ಯಮಂತ್ರಿಗೆ ಬೇರೆ ದಾರಿ ಇಲ್ಲ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್‌ ಆದೇಶ ಬಂದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು. ಅಥವಾ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದ ಕೂಡಲೇ ರಾಜೀನಾಮೆ ಕೊಡಬೇಕಿತ್ತು. ಎಫ್‌ಐಆರ್‌ ಆದ ಬಳಿಕ ಪೊಲೀಸರ ಮುಂದೆ ನಿಲ್ಲಲು ಸಿದ್ದರಾಮಯ್ಯಗೆ ಸಾಧ್ಯವೇ ಇಲ್ಲ. ಕಪ್ಪು ಚುಕ್ಕೆ ಇಲ್ಲ, ನಾನು ಸಜ್ಜನ, ಮಾದರಿ ಎಂದು ಅವರು ಹೇಳಿಕೊಳ್ಳುತ್ತಾರೆ. ಈ ಅವಕಾಶ ಅವರಿಗೆ ಬಂದಿದೆ. ಕೂಡಲೇ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿ ರಾಜ್ಯಕ್ಕೆ ಮಾದರಿಯಾಗಲಿ ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವುದರ ಜೊತೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತನಿಖೆಗೆ ಲೋಕಾಯುಕ್ತಕ್ಕೆ ಆದೇಶಿಸಲಾಗಿದೆ. ಬಿಜೆಪಿಯಿಂದ ಸದನದಲ್ಲಿ ಈ ಕುರಿತು ಹೋರಾಟ ಮಾಡಿದಾಗ, ಇದು ಬಿಜೆಪಿ ಪ್ರೇರಿತ, ಇದು ಷಡ್ಯಂತ್ರ ಎಂದು ಸಚಿವರು ಆರೋಪ ಮಾಡಿದ್ದರು. ರಾಜಭವನಕ್ಕೆ ಮುತ್ತಿಗೆ ಹಾಕಿದ ಶಾಸಕರು, ಬಾಂಗ್ಲಾ ಮಾದರಿ ಹೋರಾಟ ಮಾಡುತ್ತೇವೆಂದು ಬೆದರಿಕೆ ಹಾಕಿದ್ದರು. ಈಗ ಇದು ತನಿಖೆಗೆ ಸೂಕ್ತ ಎಂದು ನ್ಯಾಯಾಂಗದಿಂದಲೇ ತಿಳಿದುಬಂದಿದೆ. ಅದಕ್ಕೆ ಸ್ಪಷ್ಟವಾದ ಕಾರಣವನ್ನೂ ನ್ಯಾಯಾಲಯ ಹೇಳಿದೆ ಎಂದರು.

ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೇರೆ ದಾರಿಯಿಲ್ಲ. ಅವರು ಯಾವುದಕ್ಕೆ ಕಾಯುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ. ಬಿಜೆಪಿಯವರು ಪ್ರಕರಣ ದಾಖಲಿಸಿಲ್ಲ. ದೂರು ದಾಖಲಿಸಿದ್ದು ಆರ್‌ಟಿಐ ಕಾರ್ಯಕರ್ತರು ಹಾಗೂ ಹೋರಾಟಗಾರರು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಆಪಾದನೆ ಮಾಡಿದ್ದರು. ಈಗ ನ್ಯಾಯಾಲಯಕ್ಕೆ ಯಾವ ರೀತಿಯ ಆಪಾದನೆ ಮಾಡುತ್ತಾರೆ? ಎಂದು ಪ್ರಶ್ನೆ ಮಾಡಿದರು.

ಎರಡೂ ಕೋರ್ಟ್‌ಗಳಲ್ಲಿ ಅವರಿಗೆ ಹಿನ್ನಡೆಯಾಗಿದೆ. ಮೇಲಿನ ಕೋರ್ಟ್‌ಗೆ ಹೋಗುವ ಅವಕಾಶ ಇದ್ದೇ ಇದೆ. ಬಿಜೆಪಿ ಏನೂ ಹೇಳಿಲ್ಲ, ಎಲ್ಲವನ್ನೂ ಕೋರ್ಟ್‌ ಹೇಳಿದೆ. ಲೋಕಾಯುಕ್ತ ತನಿಖೆಗೆ ವಹಿಸಿರುವುದರಿಂದ ಎಫ್‌ಐಆರ್‌ ಆಗಲಿದೆ. ಲೋಕಾಯುಕ್ತ ಸ್ವತಂತ್ರ ಸಂಸ್ಥೆಯಾದರೂ ಪೊಲೀಸರು, ಪೊಲೀಸ್‌ ಇಲಾಖೆಯಡಿಯಲ್ಲೇ ಬರುತ್ತಾರೆ ಎಂದರು.

ಪ್ರತಿಭಟನೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಒತ್ತಾಯಿಸಿದ್ದೇವೆ. ಪಕ್ಷದ ಎಲ್ಲ ಮುಖಂಡರು ಸೇರಿ ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟಿಸಲಿದ್ದೇವೆ ಎಂದು ಆರ್‌.ಅಶೋಕ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago