ಕೋಲಾರ: ವಕ್ಫ್ ವಿಚಾರ ಮಾತನಾಡದಂತೆ ಒತ್ತಡ ಹೇರಿ ವಿಜಯೇಂದ್ರ 150 ಕೋಟಿ ರೂ.ಆಮಿಷವೊಡ್ಡಿದ್ದರು ಎಂದು ಬಿಜೆಪಿ ಮುಖಂಡ ಅನ್ವರ್ ಮಾಣಿಪ್ಪಾಡಿ ಆರೋಪಿಸಿದ್ದು, ಸಿಬಿಐ ಹಾಗೂ ಇಡಿ ಏನು ಮಾಡುತ್ತಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮೇಲೆ ಬಿಜೆಪಿ ಪಕ್ಷದ ಮುಖಂಡರೇ ಆಗಿರುವ ಅನ್ವರ್ 150ಕೋಟಿ ಆಮಿಷದ ಆರೋಪ ಮಾಡಿದ್ದಾರೆ. ಶಾಸಕ ಬಸವಗೌಡ ಯತ್ನಾಳ ಕೂಡ ಇದೇ ವಿಚಾರವನ್ನು ಬೇರೆ ಬೇರೆ ರೀತಿಯಲ್ಲಿ ಹೇಳಿದ್ದಾರೆ. ಹೀಗಾಗಿ ಬಿಬಿಐ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ಇಡಿ, ಸಿಬಿಐ ಇರೋದು ಕೇವಲ ಕಾಂಗ್ರೆಸ್ಗೆ ಎನ್ನುವಂತಾಗಿದೆ. ಈಗ ಇ.ಡಿ ಸಿಬಿಐ ಅವರು ಏನ್ ಮಾಡ್ತಿದ್ದಾರೆ? ಲಂಚದ ಆರೋಪ ಮಾಡಿದ್ದು ಸಿಎಂ ಅಲ್ಲ, ಆರೋಪ ಮಾಡಿದ್ದು ಅನ್ವರ್ ಮಾನಪ್ಪಾಡಿ ಹೇಳಿದ್ದಾರೆ, ಈ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಒತ್ತಡ ಹಾಕಿದ್ದಾರೆ. ಸತ್ಯಾಸತ್ಯತೆ ಹೊರಬರಲು ಇದು ತನಿಖೆಯಾಗಬೇಕು. ಅದಾನಿ ಮೇಲೆ ಎರಡೂವರೆ ಸಾವಿರ ಕೋಟಿ ಲಂಚ ಆರೋಪ ಆಫ್ಐಆರ್ ಆಗಿದೆ. ಆ ಪ್ರಕರಣದಲ್ಲೂ ಸಿಬಿಐ, ಇ.ಡಿ ಏನೂ ಮಾಡದೆ ನಾಟಕ ಮಾಡ್ತಿದ್ದಾರೆ ಎಂದು ಕಿಡಿಕಾಡಿದರು.
ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…
ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…