ಕೋಲಾರ: ವಕ್ಫ್ ವಿಚಾರ ಮಾತನಾಡದಂತೆ ಒತ್ತಡ ಹೇರಿ ವಿಜಯೇಂದ್ರ 150 ಕೋಟಿ ರೂ.ಆಮಿಷವೊಡ್ಡಿದ್ದರು ಎಂದು ಬಿಜೆಪಿ ಮುಖಂಡ ಅನ್ವರ್ ಮಾಣಿಪ್ಪಾಡಿ ಆರೋಪಿಸಿದ್ದು, ಸಿಬಿಐ ಹಾಗೂ ಇಡಿ ಏನು ಮಾಡುತ್ತಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮೇಲೆ ಬಿಜೆಪಿ ಪಕ್ಷದ ಮುಖಂಡರೇ ಆಗಿರುವ ಅನ್ವರ್ 150ಕೋಟಿ ಆಮಿಷದ ಆರೋಪ ಮಾಡಿದ್ದಾರೆ. ಶಾಸಕ ಬಸವಗೌಡ ಯತ್ನಾಳ ಕೂಡ ಇದೇ ವಿಚಾರವನ್ನು ಬೇರೆ ಬೇರೆ ರೀತಿಯಲ್ಲಿ ಹೇಳಿದ್ದಾರೆ. ಹೀಗಾಗಿ ಬಿಬಿಐ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ಇಡಿ, ಸಿಬಿಐ ಇರೋದು ಕೇವಲ ಕಾಂಗ್ರೆಸ್ಗೆ ಎನ್ನುವಂತಾಗಿದೆ. ಈಗ ಇ.ಡಿ ಸಿಬಿಐ ಅವರು ಏನ್ ಮಾಡ್ತಿದ್ದಾರೆ? ಲಂಚದ ಆರೋಪ ಮಾಡಿದ್ದು ಸಿಎಂ ಅಲ್ಲ, ಆರೋಪ ಮಾಡಿದ್ದು ಅನ್ವರ್ ಮಾನಪ್ಪಾಡಿ ಹೇಳಿದ್ದಾರೆ, ಈ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಒತ್ತಡ ಹಾಕಿದ್ದಾರೆ. ಸತ್ಯಾಸತ್ಯತೆ ಹೊರಬರಲು ಇದು ತನಿಖೆಯಾಗಬೇಕು. ಅದಾನಿ ಮೇಲೆ ಎರಡೂವರೆ ಸಾವಿರ ಕೋಟಿ ಲಂಚ ಆರೋಪ ಆಫ್ಐಆರ್ ಆಗಿದೆ. ಆ ಪ್ರಕರಣದಲ್ಲೂ ಸಿಬಿಐ, ಇ.ಡಿ ಏನೂ ಮಾಡದೆ ನಾಟಕ ಮಾಡ್ತಿದ್ದಾರೆ ಎಂದು ಕಿಡಿಕಾಡಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…