ಕೋಲಾರ: ವಕ್ಫ್ ವಿಚಾರ ಮಾತನಾಡದಂತೆ ಒತ್ತಡ ಹೇರಿ ವಿಜಯೇಂದ್ರ 150 ಕೋಟಿ ರೂ.ಆಮಿಷವೊಡ್ಡಿದ್ದರು ಎಂದು ಬಿಜೆಪಿ ಮುಖಂಡ ಅನ್ವರ್ ಮಾಣಿಪ್ಪಾಡಿ ಆರೋಪಿಸಿದ್ದು, ಸಿಬಿಐ ಹಾಗೂ ಇಡಿ ಏನು ಮಾಡುತ್ತಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮೇಲೆ ಬಿಜೆಪಿ ಪಕ್ಷದ ಮುಖಂಡರೇ ಆಗಿರುವ ಅನ್ವರ್ 150ಕೋಟಿ ಆಮಿಷದ ಆರೋಪ ಮಾಡಿದ್ದಾರೆ. ಶಾಸಕ ಬಸವಗೌಡ ಯತ್ನಾಳ ಕೂಡ ಇದೇ ವಿಚಾರವನ್ನು ಬೇರೆ ಬೇರೆ ರೀತಿಯಲ್ಲಿ ಹೇಳಿದ್ದಾರೆ. ಹೀಗಾಗಿ ಬಿಬಿಐ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ಇಡಿ, ಸಿಬಿಐ ಇರೋದು ಕೇವಲ ಕಾಂಗ್ರೆಸ್ಗೆ ಎನ್ನುವಂತಾಗಿದೆ. ಈಗ ಇ.ಡಿ ಸಿಬಿಐ ಅವರು ಏನ್ ಮಾಡ್ತಿದ್ದಾರೆ? ಲಂಚದ ಆರೋಪ ಮಾಡಿದ್ದು ಸಿಎಂ ಅಲ್ಲ, ಆರೋಪ ಮಾಡಿದ್ದು ಅನ್ವರ್ ಮಾನಪ್ಪಾಡಿ ಹೇಳಿದ್ದಾರೆ, ಈ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಒತ್ತಡ ಹಾಕಿದ್ದಾರೆ. ಸತ್ಯಾಸತ್ಯತೆ ಹೊರಬರಲು ಇದು ತನಿಖೆಯಾಗಬೇಕು. ಅದಾನಿ ಮೇಲೆ ಎರಡೂವರೆ ಸಾವಿರ ಕೋಟಿ ಲಂಚ ಆರೋಪ ಆಫ್ಐಆರ್ ಆಗಿದೆ. ಆ ಪ್ರಕರಣದಲ್ಲೂ ಸಿಬಿಐ, ಇ.ಡಿ ಏನೂ ಮಾಡದೆ ನಾಟಕ ಮಾಡ್ತಿದ್ದಾರೆ ಎಂದು ಕಿಡಿಕಾಡಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…