ರಾಜ್ಯ

ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಚಿತ್ರಗಳು ನಿರ್ಮಾಣವಾಗಲಿ ; ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು : ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಕನ್ನಡ ಚಿತ್ರರಂಗಕ್ಕೆ ಭವ್ಯ ಇತಿಹಾಸವಿದೆ. ಗಟ್ಟಿ ಅಡಿಪಾಯವಿದೆ. ಡಾ. ರಾಜ್ ಕುಮಾರ್, ಡಾ. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರು ಕನ್ನಡ ಚಿತ್ರರಂಗವನ್ನು ದೊಡ್ಡ ಮಟ್ಟಕ್ಕೆ ಬೆಳೆಸಿದ್ದಾರೆ. ಇದು ಇನ್ನಷ್ಟು ಭದ್ರವಾಗಬೇಕಾದರೆ ಹೆಚ್ಚೆಚ್ಚು ಸಿನಿಮಾಗಳು ಬರಬೇಕು. ಆ ಶ್ರೇಷ್ಠ ನಟರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಅವರು ಪ್ರತಿಪಾದಿಸಿದರು. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರು ನಿರ್ದೇಶಕರಾಗಿ 50 ವರ್ಷ ಪೂರೈಸಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದನ್ನು ಓದಿ: ದಸರಾ ಚಲನಚಿತ್ರೋತ್ಸವ: ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಫೋಟೋ ಪ್ರದರ್ಶನದ ಚಾಲನೆ

ನಮ್ಮ ಮಾತೃಭಾಷೆಯ ಸಿನಿಮಾಗಳು ಕಡಿಮೆ ಪ್ರಮಾಣದಲ್ಲಿ ಬರುತ್ತಿರುವ ಹಿನ್ನೆಲೆಯಲ್ಲಿ ಡಬ್ಬಿಂಗ್ ಸಿನಿಮಾಗಳನ್ನು ಜನ ನೋಡುತ್ತಿದ್ದಾರೆ. ನಮ್ಮಲ್ಲಿ ಉತ್ತಮ ನಿರ್ದೇಶಕರು, ಉತ್ತಮ ಕಥೆಗಳು ಲಭ್ಯ ಇರುವುದರಿಂದ ನಮ್ಮವೇ ಚಿತ್ರಗಳು ದೊಡ್ಡ ಸಂಖ್ಯೆಯಲ್ಲಿ ಬರಲಿ ಎನ್ನುವುದು ನನ್ನ ಆಶಯ ಎಂದು ಸಚಿವರು ಹೇಳಿದರು. ಇವತ್ತು ಕನ್ನಡ ಚಿತ್ರರಂಗ ಎತ್ತರದ ಸಾಧನೆಗಳನ್ನು ಮಾಡುತ್ತಿದೆ. ಉತ್ತಮ ಸಿನಿಮಾಗಳು ಬರುತ್ತಿವೆ.

ಭಾರತೀಯ ಚಿತ್ರರಂಗ ನಮ್ಮನ್ನು ಬೆರಗಿನಿಂದ ನೋಡುತ್ತಿದೆ. ಆದರೂ ಕನ್ನಡ ಚಿತ್ರಗಳು ಇನ್ನು ಹೆಚ್ಚಿನ ಸಂಖೆಯಲ್ಲಿ ಯಶಸ್ಸು ಸಾಧಿಸಬೇಕು ಹಾಗೂ ನಿರ್ಮಾಪಕರು ಉತ್ತಮ ಚಿತ್ರಗಳನ್ನು ನಿರ್ಮಿಸಲು ಅವಕಾಶ ಆಗಬೇಕು ಎಂದು ಕುಮಾರಸ್ವಾಮಿ ಅವರು ನುಡಿದರು. ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು; ನಿರ್ದೇಶಕರಾಗಿ, ನಿರ್ಮಾಪಕರಾಗಿ ಐದು ದಶಕಗಳ ಕಾಲ ನಿಲ್ಲುವುದು ಸುಲಭದ ಮಾತಲ್ಲ. ತಮ್ಮ ಇಡೀ ಕುಟುಂಬವನ್ನೇ ಚಿತ್ರರಂಗಕ್ಕೆ ಸಮರ್ಪಣೆ ಮಾಡಿಕೊಂಡ ಕುಟುಂಬ ಅವರದ್ದು. ನಾನು ಚಿತ್ರ ಪ್ರದರ್ಶಕನಾಗಿ, ಹಂಚಿಕೆದಾರನಾಗಿ ಹಾಗೂ ನಿರ್ಮಾಪಕನಾಗಿ ಕೆಲಸ ಮಾಡಿದ್ದೇನೆ.

ರಾಜೇಂದ್ರ ಸಿಂಗ್ ಬಾಬು ಅವರ ಚಿತ್ರಗಳನ್ನು ನಾನು ಹಂಚಿಕೆ ಮಾಡಿ ಪ್ರದರ್ಶಿಸಿದ್ದೇನೆ ಎಂದು ನೆನಪು ಮಾಡಿಕೊಂಡರು. ಉತ್ತಮ ಕಥೆಗಳು, ಅಂದರೆ ಕಾದಂಬರಿ ಆಧರಿತ ಚಿತ್ರಗಳನ್ನು ನಿರ್ದೇಹಿಸುತ್ತಿದ್ದ ಪುಟ್ಟಣ್ಣ ಕಣಗಾಲ್, ಸಿದ್ಧಲಿಂಗಯ್ಯ ಅವರ ಸಾಲಿಗೆ ಸೇರುವಂತಹ ನಿರ್ದೇಶಕರು ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಸಿ.ಎನ್ ಅಶ್ವತ್ಥನಾರಾಯಣ, ಮಾಜಿ ಸಚಿವ ಮುನಿರತ್ನ, ನಾಯಕ ನಟರಾದ ಕಿಚ್ಚ ಸುದೀಪ್, ಬ್ರಹ್ಮಾಂಡ ಗುರೂಜಿ, ರಾಕ್ ಲೈನ್ ವೆಂಕಟೇಶ್, ಬಸಂತ ಕುಮಾರ್ ಪಾಟೀಲ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ, ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಪ್ರಕಾಶಕ ವೀರಕಪುತ್ರ ಶ್ರೀನಿವಾಸ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

41 mins ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

1 hour ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

3 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

3 hours ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

4 hours ago