ರಾಜ್ಯ

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಜೀವನೋಪಾಯ ಮತ್ತು ಉದ್ಯಮಶೀಲತೆ ಇಲಾಖೆ ಜಂಟಿಯಾಗಿ “ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶ” ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ ಬುಧವಾರ ಸಚಿವರು ಭಾಷಣ ಮಾಡಿದರು.

ಎಲ್ಲ ಕ್ಷೇತ್ರದಲ್ಲಿಯೂ ಮಹಿಳೆಯರ ಪ್ರಾಬಲ್ಯ ಹೆಚ್ಚಿದೆ. ನೈಸರ್ಗಿಕ ಕೃಷಿ ಪದ್ಧತಿಯಲ್ಲಿಯೂ ಯಶಸ್ಸು ಕಾಣುತ್ತಿದ್ದಾರೆ. ಕರ್ನಾಟಕದಲ್ಲಿ, ಮಹಿಳೆಯರು ಈ ರೂಪಾಂತರದ ಕೇಂದ್ರದಲ್ಲಿದ್ದಾರೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ ಮೂಲಕ, ಮಹಿಳಾ ಸ್ವಸಹಾಯ ಗುಂಪುಗಳು ರಾಸಾಯನಿಕ-ಮುಕ್ತ, ಕಡಿಮೆ-ವೆಚ್ಚದ ನೈಸರ್ಗಿಕ ಕೃಷಿಯನ್ನು ಅಭ್ಯಾಸ ಮಾಡುತ್ತಿವೆ, ಕೃಷಿ ಸಖಿಗಳು ಮತ್ತು ಸಮುದಾಯ ಸಂಪನ್ಮೂಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುತ್ತಿವೆ ಮತ್ತು ಜೈವಿಕ-ಇನ್‌ಪುಟ್ ಉತ್ಪಾದನೆ ಮತ್ತು ಮೌಲ್ಯವರ್ಧನೆಯಲ್ಲಿ ಪ್ರಮುಖ ಉದ್ಯಮಗಳನ್ನು ನಡೆಸುತ್ತಿವೆ. ಇದು ಗಮನಾರ್ಹ ವಿಷಯ ಎಂದು ಡಾ. ಪಾಟೀಲ್‌ ವಿವರಿಸಿದರು.

ನೈಸರ್ಗಿಕ ಕೃಷಿ ಪದ್ಧತಿಗಳು ಮಹಿಳೆಯರಿಗೆ ಕೌಶಲ್ಯಪೂರ್ಣ ಮತ್ತು ಗೌರವಾನ್ವಿತ ಗ್ರಾಮೀಣ ಉದ್ಯೋಗವನ್ನು ಸೃಷ್ಟಿಸಿವೆ. ಸುಮಾರು 5.26 ಲಕ್ಷ ಸ್ವಸಹಾಯ ಸಂಘದ ಸದಸ್ಯರು ಮಣ್ಣಿನ ಆರೋಗ್ಯ ನಿರ್ವಹಣೆ, ಹವಾಮಾನ-ಸ್ಥಿತಿಸ್ಥಾಪಕ ಬೆಳೆ ಪದ್ಧತಿಗಳು, ಸಂಸ್ಕರಣೆ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕಗಳಲ್ಲಿ ಕೌಶಲ್ಯ ಹೊಂದುತ್ತಿದ್ದಾರೆ ಎಂದು ಡಾ. ಪಾಟೀಲ್‌ ತಿಳಿಸಿದರು.

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ಕೃಷಿ ಇಲಾಖೆಯಲ್ಲಿ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ನೈಸರ್ಗಿಕ ಕೃಷಿಗೆ ಆದ್ಯತೆ ನೀಡಲು ಹೆಚ್ಚು ಕ್ರಮ ವಹಿಸಲಾಗುತ್ತದೆ ಎಂದರು.

ಕರ್ನಾಟಕದಲ್ಲಿ ಕೃಷಿ ವಲಯಕ್ಕೆ ಭರಪೂರ ಅನುದಾನವನ್ನು ಒದಗಿಸಲಾಗುತ್ತದೆ. ರೈತರು ಹಾಗೂ ಪ್ರಮುಖವಾಗಿ ರೈತ ಮಹಿಳೆಯರಿಗೆ ಸೌಲಭ್ಯಗಳನ್ನು ನೀಡಿ, ಸಬಲೀಕರಣಕ್ಕೆ ನಮ್ಮ ಸರ್ಕಾರ ಆದ್ಯತೆ ಒದಗಿಸಲಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಜಂಟಿ ಕಾರ್ಯದರ್ಶಿ ಸ್ವಾತಿ ಶರ್ಮಾ, ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಅಭಿಯಾನದ ನಿರ್ದೇಶಕಿ ಆರ್. ಸ್ನೇಹಲ್ ಮತ್ತು ಹೆಚ್ಚುವರಿ ಅಭಿಯಾನ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

15 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

15 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

15 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

15 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

15 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

15 hours ago