ರಾಜ್ಯ

ಕಾಂಗ್ರೆಸ್ ಸರ್ಕಾರ ನ್ಯಾಯಾಲಯಕ್ಕೆ ಹೋಗಲಿ, ಛೀಮಾರಿ ಹಾಕಿಸಿಕೊಳ್ಳಲಿ:  ಆರ್.ಅಶೋಕ

  • ಯುಪಿಎ ಸರ್ಕಾರ ಯಾವುದೇ ನೆರವು ನೀಡಿಲ್ಲ, ಈ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲಿ : ಆರ್‌.ಅಶೋಕ್‌ !

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರ ಪರಿಹಾರ ಬಿಡುಗಡೆಯ ವಿರುದ್ಧ ಖಂಡಿತವಾಗಿ ನ್ಯಾಯಾಲಯದ ಮೊರೆ ಹೋಗಲಿ ಹಾಗೂ ಛೀಮಾರಿ ಹಾಕಿಸಿಕೊಂಡು ಬರಲಿ ಎಂದು ನಾನು ಆಶಿಸುತ್ತೇನೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದ ಇತಿಹಾಸದಲ್ಲೇ ದಾಖಲೆಯ ಪ್ರಮಾಣದ ಬರ ಪರಿಹಾರವನ್ನು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ನೀಡಿದೆ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಹಿಂದೆ ಯಾವುದೇ ನೆರವು ನೀಡಲಿಲ್ಲ. ಅದನ್ನು ಹೇಳುವ ಯೋಗ್ಯತೆ ಕೂಡ ರಾಜ್ಯ ಕಾಂಗ್ರೆಸ್ ನಾಯಕರಿಗಿಲ್ಲ.

ಹಿಂದೆ ಬರ-ಪ್ರವಾಹ ಪರಿಹಾರ ಕೇಳಿದ್ದಾಗ ಯುಪಿಎ ಸರ್ಕಾರ 8-9% ಮಾತ್ರ ಪರಿಹಾರ ನೀಡಿದೆ. ಆದರೆ ಮೋದಿ ಸರ್ಕಾರ ಹೆಚ್ಚುವರಿ ಪರಿಹಾರ ನೀಡಿದೆ. ನಾನು ಅಂಕಿ ಅಂಶ ಸಮೇತ ಸವಾಲು ಹಾಕಿದ್ದರೂ ಅದರ ಬಗ್ಗೆ ಯಾರೂ ಮಾತಾಡುತ್ತಿಲ್ಲ. ಇದನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರ ನ್ಯಾಯಾಲಯಕ್ಕೆ ಹೋದರೆ ಎಲ್ಲ ಹಿಂದಿನ ವಿಚಾರ ಹೊರಬರಲಿದೆ. ನ್ಯಾಯಾಲಯದಿಂದ ಸರ್ಕಾರ ಛೀಮಾರಿ ಹಾಕಿಸಿಕೊಳ್ಳಲಿದೆ ಎಂದರು.

ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಕಾನೂನಿನಡಿ ಎಲ್ಲರೂ ಸಮಾನರು. ಸರ್ಕಾರ ತನಿಖೆ ಮಾಡಲು ತಂಡ ರಚಿಸಿದ್ದು, ತೀರ್ಪು ಬಂದ ನಂತರ ಸರ್ಕಾರ ಕ್ರಮ ವಹಿಸಲಿದೆ ಎಂದರು.

ಲೋಕಸಭಾ ಚುನಾವಣೆಯ ಎರಡನೇ ಹಂತದ ಪ್ರಚಾರದಲ್ಲಿ ನಾನು ಕೂಡ ತೊಡಗಿಸಿಕೊಂಡಿದ್ದೇನೆ. ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಉತ್ತಮ ಪ್ರಚಾರ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಪಾಲ್ಗೊಂಡಿದ್ದಾರೆ ಎಂದರು.

 ಶ್ರೀನಿವಾಸ ಪ್ರಸಾದ್‌ಗೆ ಸಂತಾಪ : ಹಿರಿಯ ನಾಯಕರು, ಧೀಮಂತ ನಾಯಕ, ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ಅವರು ದೈವಾಧೀನರಾಗಿರುವುದು ಬಹಳ ದುಃಖದ ಸಂಗತಿ. ಕರ್ನಾಟಕದ ರಾಜಕಾರಣದಲ್ಲಿ ದಲಿತ ಮುಖಂಡರಾಗಿ, ಸರಳ ಜೀವಿಯಾಗಿ, 50 ವರ್ಷಕ್ಕೂ ಅಧಿಕ ಕಾಲ ಅವರು ಜನಸೇವೆ ಸಲ್ಲಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ ಹಿರಿಮೆ ಕೂಡ ಅವರಿಗಿತ್ತು. ತುಳಿತಕ್ಕೊಳಗಾದ ಜನರ ದನಿಯಾಗಿ ಅವರು ಕೆಲಸ ಮಾಡಿದ್ದರು. ಅವರ ಕುಟುಂಬಕ್ಕೆ, ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ ಎಂದು ಆರ್.ಅಶೋಕ ಸಂತಾಪ ಸೂಚಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago