ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರವಿದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದರು.
ಕಾಂಗ್ರೆಸ್ ಶಾಸಕರ ಬಳಿ ಬಂದು ಮಾತಾಡಿದ ಬಿಜೆಪಿ ನಾಯಕರು ಯಾರು ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟವಾಗಿ ತಿಳಿಸಲಿ. ಗ್ಯಾರಂಟಿಗಳನ್ನು ತೆಗೆದುಹಾಕಬೇಕೆಂದು ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ ಮಾಡಲು ಪ್ರಯತ್ನ ಶುರುವಾಗಿದೆ. ನೀರಿನ ದರ ಹಾಗೂ ಬಸ್ ಟಿಕೆಟ್ ದರ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಪೆಟ್ರೋಲ್, ಮಾರ್ಗಸೂಚಿ ದರ ಹೆಚ್ಚಾಗಿದೆ. ಉಸಿರಾಡುವ ಗಾಳಿಗೂ ತೆರಿಗೆ ಹಾಕಿದರೆ ಇನ್ನು ಯಾವುದೂ ಉಳಿಯುವುದಿಲ್ಲ ಎಂದು ವ್ಯಂಗ್ಯವಾಡಿದರು.
ಗ್ಯಾರಂಟಿಗೆ ಹಣ ಮೀಸಲಿಡದೆ ಸರ್ಕಾರ ದಿವಾಳಿಯಾಗಿದೆ. ಇಂತಹ ಸ್ಥಿತಿಯಲ್ಲೂ ಕಾಂಗ್ರೆಸ್ ನಾಯಕರು ಏಣಿ ಹತ್ತಿಸಿದ ಮತದಾರರ ಬಗ್ಗೆ ಬಹಳ ಕೀಳಾಗಿ ಮಾತಾಡುತ್ತಿದ್ದಾರೆ. ಮುಂದೆ ಅಧಿಕಾರಕ್ಕೆ ಬರಲ್ಲ ಎಂಬುದು ಖಚಿತವಾಗಿರುವುದರಿಂದ ಆದಷ್ಟು ಲೂಟಿ ಮಾಡಲು ನೋಡುತ್ತಿದ್ದಾರೆ. ಈ ಅವಧಿಯಲ್ಲೇ ಡಾ.ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲು ತಂತ್ರ ಮಾಡುತ್ತಿದ್ದಾರೆ. ಶಾಸಕರಿಗೆ ಹಣ ಕೊಡಲು ಬಂದವರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದರು.
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ರೂ.೬೦…
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…