ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರವಿದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದರು.
ಕಾಂಗ್ರೆಸ್ ಶಾಸಕರ ಬಳಿ ಬಂದು ಮಾತಾಡಿದ ಬಿಜೆಪಿ ನಾಯಕರು ಯಾರು ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟವಾಗಿ ತಿಳಿಸಲಿ. ಗ್ಯಾರಂಟಿಗಳನ್ನು ತೆಗೆದುಹಾಕಬೇಕೆಂದು ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ ಮಾಡಲು ಪ್ರಯತ್ನ ಶುರುವಾಗಿದೆ. ನೀರಿನ ದರ ಹಾಗೂ ಬಸ್ ಟಿಕೆಟ್ ದರ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಪೆಟ್ರೋಲ್, ಮಾರ್ಗಸೂಚಿ ದರ ಹೆಚ್ಚಾಗಿದೆ. ಉಸಿರಾಡುವ ಗಾಳಿಗೂ ತೆರಿಗೆ ಹಾಕಿದರೆ ಇನ್ನು ಯಾವುದೂ ಉಳಿಯುವುದಿಲ್ಲ ಎಂದು ವ್ಯಂಗ್ಯವಾಡಿದರು.
ಗ್ಯಾರಂಟಿಗೆ ಹಣ ಮೀಸಲಿಡದೆ ಸರ್ಕಾರ ದಿವಾಳಿಯಾಗಿದೆ. ಇಂತಹ ಸ್ಥಿತಿಯಲ್ಲೂ ಕಾಂಗ್ರೆಸ್ ನಾಯಕರು ಏಣಿ ಹತ್ತಿಸಿದ ಮತದಾರರ ಬಗ್ಗೆ ಬಹಳ ಕೀಳಾಗಿ ಮಾತಾಡುತ್ತಿದ್ದಾರೆ. ಮುಂದೆ ಅಧಿಕಾರಕ್ಕೆ ಬರಲ್ಲ ಎಂಬುದು ಖಚಿತವಾಗಿರುವುದರಿಂದ ಆದಷ್ಟು ಲೂಟಿ ಮಾಡಲು ನೋಡುತ್ತಿದ್ದಾರೆ. ಈ ಅವಧಿಯಲ್ಲೇ ಡಾ.ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲು ತಂತ್ರ ಮಾಡುತ್ತಿದ್ದಾರೆ. ಶಾಸಕರಿಗೆ ಹಣ ಕೊಡಲು ಬಂದವರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…