ರಾಜ್ಯ

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಶ್ವನಾಥ್ ಅವರಿಗೆ ಅರಳುಮರಳು. ಅವರನ್ನು ಕ್ಷಮಿಸಿಬಿಡೋಣ. ಅವರ ಹೇಳಿಕೆ ಶಿಕ್ಷಕರು ಮತ್ತು ಈ ನಾಡಿನ ಮಕ್ಕಳಿಗೆ ಮಾಡಿದ ಅವಮಾನ” ಎಂದು ಕಿಡಿಕಾರಿದರು.

ವಿಶ್ವನಾಥ್ ಆರೋಪವೇನು?
ಮೈಸೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ್ದ ಎಂಎಲ್‌ಸಿ ಎಚ್.ವಿಶ್ವನಾಥ್, “ಕಳೆದ ವರ್ಷ ಶೇ.80.1 ಇದ್ದ ಫಲಿತಾಂಶ ಈ ವರ್ಷ ಶೇ.94.1ಕ್ಕೆ ಜಿಗಿದಿದೆ. 20ಕ್ಕೆ 20 ಆಂತರಿಕ ಅಂಕಗಳನ್ನು ಕುರುಡಾಗಿ ನೀಡಲಾಗಿದೆ. ಪಾಸಾಗಲು ಬೇಕಾದದ್ದು ಇನ್ನು 13 ಅಂಕ. ಅದನ್ನೂ ಕಾಪಿ ಮಾಡಿಸಿದ್ದಾರೆ” ಎಂದು ಆರೋಪಿಸಿದ್ದರು.

“ಉತ್ತರ ಕರ್ನಾಟಕದಲ್ಲಿ ಶೇ.40ರಷ್ಟು ಶಿಕ್ಷಕರ ಕೊರತೆ ಇದೆ. ಬಹಳಷ್ಟು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಹೀಗಿದ್ದರೂ ಇಷ್ಟೊಂದು ಫಲಿತಾಂಶ ಬಂದಿದ್ದು ಹೇಗೆ? ಮೌಲ್ಯಮಾಪನ ಕೇಂದ್ರಗಳಿಗೆ ಸಚಿವರೇ ಭೇಟಿ ನೀಡಿದ್ದು ತಪ್ಪು” ಎಂದು ವಿಶ್ವನಾಥ್ ಪ್ರಶ್ನಿಸಿದ್ದರು.

ಸಚಿವರ ಸ್ಪಷ್ಟನೆ
ಇದಕ್ಕೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, “ಅಕ್ರಮ ನಡೆಸಿ ಫಲಿತಾಂಶ ಹೆಚ್ಚಳವಾಗಿದೆ ಎನ್ನುವುದು ಶಿಕ್ಷಕರ ಪರಿಶ್ರಮಕ್ಕೆ ಮಾಡಿದ ಅಪಮಾನ. ವಿಶ್ವನಾಥ್ ಅವರೇ ಹಿಂದೊಮ್ಮೆ ಶಿಕ್ಷಣ ಸಚಿವರಾಗಿದ್ದವರು. ಅವರಿಗೆ ಶಿಕ್ಷಣ ವ್ಯವಸ್ಥೆಯ ಬಗ್ಗೆ ಗೊತ್ತಿರಬೇಕು” ಎಂದರು.

ಇದೇ ವೇಳೆ, ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದಂತೆ ಈ ಬಾರಿ ಗ್ರೇಡ್ ಬದಲು ಅಂಕ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. “ಮುಂದಿನ ವರ್ಷದಿಂದ ಗ್ರೇಡ್ ನೀಡುವ ಕುರಿತು ಸರ್ಕಾರ ನಿರ್ಧರಿಸಲಿದೆ. ನಾವು ಹಿಂದಿ ವಿರೋಧಿಗಳಲ್ಲ. ಕನ್ನಡವನ್ನು ಉಳಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

59 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

1 hour ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago