ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಶ್ವನಾಥ್ ಅವರಿಗೆ ಅರಳುಮರಳು. ಅವರನ್ನು ಕ್ಷಮಿಸಿಬಿಡೋಣ. ಅವರ ಹೇಳಿಕೆ ಶಿಕ್ಷಕರು ಮತ್ತು ಈ ನಾಡಿನ ಮಕ್ಕಳಿಗೆ ಮಾಡಿದ ಅವಮಾನ” ಎಂದು ಕಿಡಿಕಾರಿದರು.
ವಿಶ್ವನಾಥ್ ಆರೋಪವೇನು?
ಮೈಸೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ್ದ ಎಂಎಲ್ಸಿ ಎಚ್.ವಿಶ್ವನಾಥ್, “ಕಳೆದ ವರ್ಷ ಶೇ.80.1 ಇದ್ದ ಫಲಿತಾಂಶ ಈ ವರ್ಷ ಶೇ.94.1ಕ್ಕೆ ಜಿಗಿದಿದೆ. 20ಕ್ಕೆ 20 ಆಂತರಿಕ ಅಂಕಗಳನ್ನು ಕುರುಡಾಗಿ ನೀಡಲಾಗಿದೆ. ಪಾಸಾಗಲು ಬೇಕಾದದ್ದು ಇನ್ನು 13 ಅಂಕ. ಅದನ್ನೂ ಕಾಪಿ ಮಾಡಿಸಿದ್ದಾರೆ” ಎಂದು ಆರೋಪಿಸಿದ್ದರು.
“ಉತ್ತರ ಕರ್ನಾಟಕದಲ್ಲಿ ಶೇ.40ರಷ್ಟು ಶಿಕ್ಷಕರ ಕೊರತೆ ಇದೆ. ಬಹಳಷ್ಟು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಹೀಗಿದ್ದರೂ ಇಷ್ಟೊಂದು ಫಲಿತಾಂಶ ಬಂದಿದ್ದು ಹೇಗೆ? ಮೌಲ್ಯಮಾಪನ ಕೇಂದ್ರಗಳಿಗೆ ಸಚಿವರೇ ಭೇಟಿ ನೀಡಿದ್ದು ತಪ್ಪು” ಎಂದು ವಿಶ್ವನಾಥ್ ಪ್ರಶ್ನಿಸಿದ್ದರು.
ಸಚಿವರ ಸ್ಪಷ್ಟನೆ
ಇದಕ್ಕೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, “ಅಕ್ರಮ ನಡೆಸಿ ಫಲಿತಾಂಶ ಹೆಚ್ಚಳವಾಗಿದೆ ಎನ್ನುವುದು ಶಿಕ್ಷಕರ ಪರಿಶ್ರಮಕ್ಕೆ ಮಾಡಿದ ಅಪಮಾನ. ವಿಶ್ವನಾಥ್ ಅವರೇ ಹಿಂದೊಮ್ಮೆ ಶಿಕ್ಷಣ ಸಚಿವರಾಗಿದ್ದವರು. ಅವರಿಗೆ ಶಿಕ್ಷಣ ವ್ಯವಸ್ಥೆಯ ಬಗ್ಗೆ ಗೊತ್ತಿರಬೇಕು” ಎಂದರು.
ಇದೇ ವೇಳೆ, ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದಂತೆ ಈ ಬಾರಿ ಗ್ರೇಡ್ ಬದಲು ಅಂಕ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. “ಮುಂದಿನ ವರ್ಷದಿಂದ ಗ್ರೇಡ್ ನೀಡುವ ಕುರಿತು ಸರ್ಕಾರ ನಿರ್ಧರಿಸಲಿದೆ. ನಾವು ಹಿಂದಿ ವಿರೋಧಿಗಳಲ್ಲ. ಕನ್ನಡವನ್ನು ಉಳಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…