ರಾಜ್ಯ

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಶ್ವನಾಥ್ ಅವರಿಗೆ ಅರಳುಮರಳು. ಅವರನ್ನು ಕ್ಷಮಿಸಿಬಿಡೋಣ. ಅವರ ಹೇಳಿಕೆ ಶಿಕ್ಷಕರು ಮತ್ತು ಈ ನಾಡಿನ ಮಕ್ಕಳಿಗೆ ಮಾಡಿದ ಅವಮಾನ” ಎಂದು ಕಿಡಿಕಾರಿದರು.

ವಿಶ್ವನಾಥ್ ಆರೋಪವೇನು?
ಮೈಸೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ್ದ ಎಂಎಲ್‌ಸಿ ಎಚ್.ವಿಶ್ವನಾಥ್, “ಕಳೆದ ವರ್ಷ ಶೇ.80.1 ಇದ್ದ ಫಲಿತಾಂಶ ಈ ವರ್ಷ ಶೇ.94.1ಕ್ಕೆ ಜಿಗಿದಿದೆ. 20ಕ್ಕೆ 20 ಆಂತರಿಕ ಅಂಕಗಳನ್ನು ಕುರುಡಾಗಿ ನೀಡಲಾಗಿದೆ. ಪಾಸಾಗಲು ಬೇಕಾದದ್ದು ಇನ್ನು 13 ಅಂಕ. ಅದನ್ನೂ ಕಾಪಿ ಮಾಡಿಸಿದ್ದಾರೆ” ಎಂದು ಆರೋಪಿಸಿದ್ದರು.

“ಉತ್ತರ ಕರ್ನಾಟಕದಲ್ಲಿ ಶೇ.40ರಷ್ಟು ಶಿಕ್ಷಕರ ಕೊರತೆ ಇದೆ. ಬಹಳಷ್ಟು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಹೀಗಿದ್ದರೂ ಇಷ್ಟೊಂದು ಫಲಿತಾಂಶ ಬಂದಿದ್ದು ಹೇಗೆ? ಮೌಲ್ಯಮಾಪನ ಕೇಂದ್ರಗಳಿಗೆ ಸಚಿವರೇ ಭೇಟಿ ನೀಡಿದ್ದು ತಪ್ಪು” ಎಂದು ವಿಶ್ವನಾಥ್ ಪ್ರಶ್ನಿಸಿದ್ದರು.

ಸಚಿವರ ಸ್ಪಷ್ಟನೆ
ಇದಕ್ಕೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, “ಅಕ್ರಮ ನಡೆಸಿ ಫಲಿತಾಂಶ ಹೆಚ್ಚಳವಾಗಿದೆ ಎನ್ನುವುದು ಶಿಕ್ಷಕರ ಪರಿಶ್ರಮಕ್ಕೆ ಮಾಡಿದ ಅಪಮಾನ. ವಿಶ್ವನಾಥ್ ಅವರೇ ಹಿಂದೊಮ್ಮೆ ಶಿಕ್ಷಣ ಸಚಿವರಾಗಿದ್ದವರು. ಅವರಿಗೆ ಶಿಕ್ಷಣ ವ್ಯವಸ್ಥೆಯ ಬಗ್ಗೆ ಗೊತ್ತಿರಬೇಕು” ಎಂದರು.

ಇದೇ ವೇಳೆ, ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದಂತೆ ಈ ಬಾರಿ ಗ್ರೇಡ್ ಬದಲು ಅಂಕ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. “ಮುಂದಿನ ವರ್ಷದಿಂದ ಗ್ರೇಡ್ ನೀಡುವ ಕುರಿತು ಸರ್ಕಾರ ನಿರ್ಧರಿಸಲಿದೆ. ನಾವು ಹಿಂದಿ ವಿರೋಧಿಗಳಲ್ಲ. ಕನ್ನಡವನ್ನು ಉಳಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

30 mins ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

2 hours ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

3 hours ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

3 hours ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

4 hours ago