ರಾಜ್ಯ

ಮುಂದಿನ ಶುಕ್ರವಾರ ಮತ್ತೆ ಕೆಫೆ ಲಾಂಚ್‌ ಮಾಡೋಣ : ರಾಘವೇಂದ್ರ ರಾವ್‌ !

ಬೆಂಗಳೂರು : ಮುಂಬರುವ ಶುಕ್ರವಾರ ಶಿವರಾತ್ರಿಯಂದು ರಾಮೇಶ್ವರಂ ಕೆಫೆ ಮತ್ತೆ ಲಾಂಚ್‌ ಮಾಡೋಣ ಎಂದು ಕೆಫೆ ಮಾಲೀಕರಾದ ರಾಘವೇಂದ್ರ ರಾವ್‌ ತಿಳಿಸಿದ್ದಾರೆ.

ನೆನ್ನೆ ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಪೋಟ ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಇದೀಗ ಈ ವಿಚಾರದ ಕುರಿತು ಮಾಲೀಕರಾದ ರಾಘವೇಂದ್ರ ರಾವ್‌ ಮಾಧ್ಯಮಗಳೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಪ್ರಾರಂಭದ ಹಂತದಿಂದಲೂ ಒಂದಲ್ಲಾ ಒಂದು ಕಷ್ಟಗಳು ಎದುರಾಗಿದೆ. ಆದರೆ ಅದನ್ನೆಲ್ಲ ಮೆಟ್ಟಿಲುಗಳನ್ನಾಗಿಸಿಕೊಂಡು ಈ ಹಂತಕ್ಕೆ ಬಂದು ತಲುಪಿದ್ದೇವೆ ಎಂದರು.

ಇನ್ನು ಮುಂದಕ್ಕೆ ಯಾರ್ಯಾರು ಬರುತ್ತಾರೆ ನೋಡೋಣ ಎಲ್ಲವನ್ನು ಎದುರಿಸೋಣ. ನಮಗೆ ಕನ್ನಡಿಗರೆಲ್ಲರ ಬೆಂಬಲವಿರಲಿ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಪೊಲೀಸ್‌ ಆಯುಕ್ತರಾದ ಬಿ.ದಯಾನಂದ್‌ ಸೇರಿದಂತೆ ಎಲ್ಲಾ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಮಾಧ್ಯಮದವರು ಈ ಸಂದರ್ಭದಲ್ಲಿ ನಮ್ಮ ಜೊತೆ ನಿಂತಿದ್ದಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ಬರುವ ಶುಕ್ರವಾರ ಶಿವರಾತ್ರಿ ದಿನದಂದು ಇದೇ ಜಾಗದಲ್ಲಿ ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಕೆಫೆ ಪ್ರಾರಂಭ ಮಾಡೋಣ. ಅದಕ್ಕೆ ನೀವೆಲ್ಲರೂ ಬಂದು ಸಾಕ್ಷಿಯಾಗಬೇಕು ಎಂದು ಮನವಿ ಮಾಡಿದರು.

 

andolana

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

4 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

5 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

5 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

6 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

6 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

6 hours ago