ಬೆಂಗಳೂರು : ಮುಂಬರುವ ಶುಕ್ರವಾರ ಶಿವರಾತ್ರಿಯಂದು ರಾಮೇಶ್ವರಂ ಕೆಫೆ ಮತ್ತೆ ಲಾಂಚ್ ಮಾಡೋಣ ಎಂದು ಕೆಫೆ ಮಾಲೀಕರಾದ ರಾಘವೇಂದ್ರ ರಾವ್ ತಿಳಿಸಿದ್ದಾರೆ.
ನೆನ್ನೆ ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಇದೀಗ ಈ ವಿಚಾರದ ಕುರಿತು ಮಾಲೀಕರಾದ ರಾಘವೇಂದ್ರ ರಾವ್ ಮಾಧ್ಯಮಗಳೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಪ್ರಾರಂಭದ ಹಂತದಿಂದಲೂ ಒಂದಲ್ಲಾ ಒಂದು ಕಷ್ಟಗಳು ಎದುರಾಗಿದೆ. ಆದರೆ ಅದನ್ನೆಲ್ಲ ಮೆಟ್ಟಿಲುಗಳನ್ನಾಗಿಸಿಕೊಂಡು ಈ ಹಂತಕ್ಕೆ ಬಂದು ತಲುಪಿದ್ದೇವೆ ಎಂದರು.
ಇನ್ನು ಮುಂದಕ್ಕೆ ಯಾರ್ಯಾರು ಬರುತ್ತಾರೆ ನೋಡೋಣ ಎಲ್ಲವನ್ನು ಎದುರಿಸೋಣ. ನಮಗೆ ಕನ್ನಡಿಗರೆಲ್ಲರ ಬೆಂಬಲವಿರಲಿ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಸೇರಿದಂತೆ ಎಲ್ಲಾ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಮಾಧ್ಯಮದವರು ಈ ಸಂದರ್ಭದಲ್ಲಿ ನಮ್ಮ ಜೊತೆ ನಿಂತಿದ್ದಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ಬರುವ ಶುಕ್ರವಾರ ಶಿವರಾತ್ರಿ ದಿನದಂದು ಇದೇ ಜಾಗದಲ್ಲಿ ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಕೆಫೆ ಪ್ರಾರಂಭ ಮಾಡೋಣ. ಅದಕ್ಕೆ ನೀವೆಲ್ಲರೂ ಬಂದು ಸಾಕ್ಷಿಯಾಗಬೇಕು ಎಂದು ಮನವಿ ಮಾಡಿದರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…