ರಾಜ್ಯ

ಮುಂದಿನ ಶುಕ್ರವಾರ ಮತ್ತೆ ಕೆಫೆ ಲಾಂಚ್‌ ಮಾಡೋಣ : ರಾಘವೇಂದ್ರ ರಾವ್‌ !

ಬೆಂಗಳೂರು : ಮುಂಬರುವ ಶುಕ್ರವಾರ ಶಿವರಾತ್ರಿಯಂದು ರಾಮೇಶ್ವರಂ ಕೆಫೆ ಮತ್ತೆ ಲಾಂಚ್‌ ಮಾಡೋಣ ಎಂದು ಕೆಫೆ ಮಾಲೀಕರಾದ ರಾಘವೇಂದ್ರ ರಾವ್‌ ತಿಳಿಸಿದ್ದಾರೆ.

ನೆನ್ನೆ ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಪೋಟ ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಇದೀಗ ಈ ವಿಚಾರದ ಕುರಿತು ಮಾಲೀಕರಾದ ರಾಘವೇಂದ್ರ ರಾವ್‌ ಮಾಧ್ಯಮಗಳೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಪ್ರಾರಂಭದ ಹಂತದಿಂದಲೂ ಒಂದಲ್ಲಾ ಒಂದು ಕಷ್ಟಗಳು ಎದುರಾಗಿದೆ. ಆದರೆ ಅದನ್ನೆಲ್ಲ ಮೆಟ್ಟಿಲುಗಳನ್ನಾಗಿಸಿಕೊಂಡು ಈ ಹಂತಕ್ಕೆ ಬಂದು ತಲುಪಿದ್ದೇವೆ ಎಂದರು.

ಇನ್ನು ಮುಂದಕ್ಕೆ ಯಾರ್ಯಾರು ಬರುತ್ತಾರೆ ನೋಡೋಣ ಎಲ್ಲವನ್ನು ಎದುರಿಸೋಣ. ನಮಗೆ ಕನ್ನಡಿಗರೆಲ್ಲರ ಬೆಂಬಲವಿರಲಿ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಪೊಲೀಸ್‌ ಆಯುಕ್ತರಾದ ಬಿ.ದಯಾನಂದ್‌ ಸೇರಿದಂತೆ ಎಲ್ಲಾ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಮಾಧ್ಯಮದವರು ಈ ಸಂದರ್ಭದಲ್ಲಿ ನಮ್ಮ ಜೊತೆ ನಿಂತಿದ್ದಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ಬರುವ ಶುಕ್ರವಾರ ಶಿವರಾತ್ರಿ ದಿನದಂದು ಇದೇ ಜಾಗದಲ್ಲಿ ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಕೆಫೆ ಪ್ರಾರಂಭ ಮಾಡೋಣ. ಅದಕ್ಕೆ ನೀವೆಲ್ಲರೂ ಬಂದು ಸಾಕ್ಷಿಯಾಗಬೇಕು ಎಂದು ಮನವಿ ಮಾಡಿದರು.

 

andolana

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

58 mins ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

1 hour ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

1 hour ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

1 hour ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

1 hour ago