ಬೆಂಗಳೂರು : ಮುಂಬರುವ ಶುಕ್ರವಾರ ಶಿವರಾತ್ರಿಯಂದು ರಾಮೇಶ್ವರಂ ಕೆಫೆ ಮತ್ತೆ ಲಾಂಚ್ ಮಾಡೋಣ ಎಂದು ಕೆಫೆ ಮಾಲೀಕರಾದ ರಾಘವೇಂದ್ರ ರಾವ್ ತಿಳಿಸಿದ್ದಾರೆ.
ನೆನ್ನೆ ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಇದೀಗ ಈ ವಿಚಾರದ ಕುರಿತು ಮಾಲೀಕರಾದ ರಾಘವೇಂದ್ರ ರಾವ್ ಮಾಧ್ಯಮಗಳೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಪ್ರಾರಂಭದ ಹಂತದಿಂದಲೂ ಒಂದಲ್ಲಾ ಒಂದು ಕಷ್ಟಗಳು ಎದುರಾಗಿದೆ. ಆದರೆ ಅದನ್ನೆಲ್ಲ ಮೆಟ್ಟಿಲುಗಳನ್ನಾಗಿಸಿಕೊಂಡು ಈ ಹಂತಕ್ಕೆ ಬಂದು ತಲುಪಿದ್ದೇವೆ ಎಂದರು.
ಇನ್ನು ಮುಂದಕ್ಕೆ ಯಾರ್ಯಾರು ಬರುತ್ತಾರೆ ನೋಡೋಣ ಎಲ್ಲವನ್ನು ಎದುರಿಸೋಣ. ನಮಗೆ ಕನ್ನಡಿಗರೆಲ್ಲರ ಬೆಂಬಲವಿರಲಿ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಸೇರಿದಂತೆ ಎಲ್ಲಾ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಮಾಧ್ಯಮದವರು ಈ ಸಂದರ್ಭದಲ್ಲಿ ನಮ್ಮ ಜೊತೆ ನಿಂತಿದ್ದಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ಬರುವ ಶುಕ್ರವಾರ ಶಿವರಾತ್ರಿ ದಿನದಂದು ಇದೇ ಜಾಗದಲ್ಲಿ ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಕೆಫೆ ಪ್ರಾರಂಭ ಮಾಡೋಣ. ಅದಕ್ಕೆ ನೀವೆಲ್ಲರೂ ಬಂದು ಸಾಕ್ಷಿಯಾಗಬೇಕು ಎಂದು ಮನವಿ ಮಾಡಿದರು.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…