Mysore
29
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ ಇಂತಹ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಈ ಸೂಚನೆ ಸರಿಯಿಲ್ಲ ಎಂದು ಕಿಡಿಕಾರಿದರು.

ಗಣೇಶ ಹಬ್ಬದ ವೇಳೆ ರಾಜ್ಯ ಹಾಗೂ ದೇಶಾದ್ಯಂತ ಬಹಳ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಆಹಾರ ಸುರಕ್ಷತಾ ಕ್ರಮ ಕೈಗೊಳ್ಳುವುದು ಸರಿ. ಆದರೆ ಹೀಗೆ ಹುಚ್ಚರ ರೀತಿ ಎಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ಹಬ್ಬಕ್ಕೆ ತೊಂದರೆ ಕೊಡಲೆಂದೇ ರಾಜ್ಯ ಸರ್ಕಾರ ಇಂತಹ ಆದೇಶ ಹೊರಡಿಸಿದೆ. ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘಟಕರು ಇದಕ್ಕೆ ಕಿವಿಗೊಡಬೇಕಿಲ್ಲ ಎಂದು ಕಿವಿಮಾತು ಹೇಳಿದರು.

ಎಲ್ಲಾದರೂ ದುರುದ್ದೇಶದಿಂದ ಪ್ರಸಾದದಲ್ಲಿ ವಿಷ ಬೆರೆಸುವಂತ ಪ್ರಕರಣ ನಡೆದರೆ ಕ್ರಿಮಿನಲ್‌ ಕೇಸ್‌ ದಾಖಲಿಸಲಿ. ಆದರೆ ಸರ್ಕಾರವೇ ಹೀಗೆ ದುರುದ್ದೇಶ ಇಟ್ಟುಕೊಂಡು ಆದೇಶ ಹೊರಡಿಸಿದರೆ ಹೇಗೆ ಎಂದು ಪ್ರಶ್ನೆ ಮಾಡಿದರು.

Tags:
error: Content is protected !!