ರಾಜ್ಯ

ಮಾರಣಾಂತಿಕ ರೋಗ| ದಯಾ ಮರಣಕ್ಕೆ ಆರೋಗ್ಯ ಇಲಾಖೆ ಅವಕಾಶ

ಬೆಂಗಳೂರು: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ತೀವ್ರ ಅನಾರೋಗ್ಯಕ್ಕೊಳಗಾಗಿ ಯಾವುದೇ ಚಿಕಿತ್ಸೆ ನೀಡಿದರೂ ಗುಣಮುಖರಾಗಲು ಸಾಧ್ಯವೇ ಇಲ್ಲದ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕನ್ನು ರಾಜ್ಯದಲ್ಲಿ ಜಾರಿ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಚೇತರಿಕೆಯ ಭರವಸೆ ಇಲ್ಲದೆ ಮಾರಕ ಆರೋಗ್ಯದಿಂದ ಬಳಲುತ್ತಿರುವವರಿಗೆ ಅಥವಾ ನಿರಂತರ ಕೋಮಾ ಸ್ಥಿತಿಯಲ್ಲಿರುವವರು ಯಾವುದೇ ಚಿಕಿತ್ಸೆ ನೀಡಿದರೂ ಬದುಕಲ್ಲ ಎಂಬ ರೋಗಿಗಳಿಗೆ ಈ ಆದೇಶದಿಂದ
ಅವರು ಘನತೆಯಿಂದ ಸಾವನ್ನಪ್ಪಲು ಅವಕಾಶ ಸಿಕ್ಕಂತಾಗುತ್ತದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್‌, ರೋಗಿಯು ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂಕೋರ್ಟ್‌ ನಿರ್ದೆಶವನ್ನು ಜಾರಿಗೆ ತರಲು ಐತಿಹಾಸಿಕ ಆದೇಶ ಹೊರಡಿಸಿದ್ದೇವೆ. ಇದು ಚೇತರಿಕೆಯ ಭರವಸೆ ಇಲ್ಲದ ಮಾರಕ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಮುಂದೆ ಜೀವ ಉಳಿಸುವ ಚಿಕಿತ್ಸೆಯಿಂದ ಪ್ರಯೋಜನ ಆಗಲ್ಲ ಎಂಬುದನ್ನು ದೃಢೀಕರಿಸಿದ ನಂತರ ಘನತೆಯಿಂದ ಸಾಯುವ ಅವಕಾಶವನ್ನು ಈ ಕಾನೂನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಪ್ರಗತಿಪರ ರಾಜ್ಯವಾಗಿದ್ದು, ನ್ಯಾಯಯುತ ಸಮಾಜಕ್ಕಾಗಿ ಉದಾರ ಮತ್ತು ಸಮಾನ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಾವು ಯಾವಾಗಲೂ ಮುಂಚೂಣಿಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ರೋಗಿಯು ಘನತೆಯಿಂದ ಸಾಯುವ ಹಕ್ಕಿನ ಸಂಬಂಧ ಜಿಲ್ಲಾ ಮಟ್ಟದಲ್ಲಿ ತಜ್ಞ ವೈದ್ಯರನ್ನೊಳಗೊಂಡ ಸಮಿತಿ ರಚಿಸಲಾಗುತ್ತದೆ. ಈ ಸಮಿತಿ ರೋಗಿಗೆ ಯಾವುದೇ ಚಿಕಿತ್ಸೆ ನೀಡಿದರೂ ಬದುಕುಳಿಯಲ್ಲ ಎಂದು ದೃಢಪಡಿಸಿದ ನಂತರ ಘನತೆಯಿಂದ ಸಾಯಲು ಅವಕಾಶ ಕೊಡುವ ನಿರ್ಧಾರ ಕೈಗೊಳ್ಳುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟ್ವಿಟ್‌ನಲ್ಲಿ ತಿಳಿಸಿದ್ದಾರೆ.

ಒಬ್ಬ ರೋಗಿಯು ಗಂಭೀರ ಕಾಯಿಲೆ ಅಸ್ವಸ್ಥನಾಗಿ ಚೇತರಿಕೆ ಅಥವಾ ಗುಣಮುಖ ಆಶಾಭಾವನೆ ಹೊಂದಿಲ್ಲದೆ ಸುದೀರ್ಘ ಚಿಕಿತ್ಸೆ ಪಡೆಯುತ್ತಿದ್ದರೆ ಹಾಗೂ ಯಾವುದೇ ಚೇತರಿಕೆ ಸಾಮರ್ಥ್ಯ ಹೊಂದಿರದ ಸಂದರ್ಭದಲ್ಲಿ ನಿಗದಿಯ ಕಾರ್ಯ-ಪೂರಕವಾಗಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯ ಪಟ್ಟಿತ್ತು ಈಗ ರಾಜ್ಯ ಸರ್ಕಾರ ಈ ನಿರ್ದೇಶನ ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

7 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

8 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

9 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

9 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

9 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

10 hours ago