ರಾಜ್ಯ

ಮಾರಣಾಂತಿಕ ರೋಗ| ದಯಾ ಮರಣಕ್ಕೆ ಆರೋಗ್ಯ ಇಲಾಖೆ ಅವಕಾಶ

ಬೆಂಗಳೂರು: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ತೀವ್ರ ಅನಾರೋಗ್ಯಕ್ಕೊಳಗಾಗಿ ಯಾವುದೇ ಚಿಕಿತ್ಸೆ ನೀಡಿದರೂ ಗುಣಮುಖರಾಗಲು ಸಾಧ್ಯವೇ ಇಲ್ಲದ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕನ್ನು ರಾಜ್ಯದಲ್ಲಿ ಜಾರಿ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಚೇತರಿಕೆಯ ಭರವಸೆ ಇಲ್ಲದೆ ಮಾರಕ ಆರೋಗ್ಯದಿಂದ ಬಳಲುತ್ತಿರುವವರಿಗೆ ಅಥವಾ ನಿರಂತರ ಕೋಮಾ ಸ್ಥಿತಿಯಲ್ಲಿರುವವರು ಯಾವುದೇ ಚಿಕಿತ್ಸೆ ನೀಡಿದರೂ ಬದುಕಲ್ಲ ಎಂಬ ರೋಗಿಗಳಿಗೆ ಈ ಆದೇಶದಿಂದ
ಅವರು ಘನತೆಯಿಂದ ಸಾವನ್ನಪ್ಪಲು ಅವಕಾಶ ಸಿಕ್ಕಂತಾಗುತ್ತದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್‌, ರೋಗಿಯು ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂಕೋರ್ಟ್‌ ನಿರ್ದೆಶವನ್ನು ಜಾರಿಗೆ ತರಲು ಐತಿಹಾಸಿಕ ಆದೇಶ ಹೊರಡಿಸಿದ್ದೇವೆ. ಇದು ಚೇತರಿಕೆಯ ಭರವಸೆ ಇಲ್ಲದ ಮಾರಕ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಮುಂದೆ ಜೀವ ಉಳಿಸುವ ಚಿಕಿತ್ಸೆಯಿಂದ ಪ್ರಯೋಜನ ಆಗಲ್ಲ ಎಂಬುದನ್ನು ದೃಢೀಕರಿಸಿದ ನಂತರ ಘನತೆಯಿಂದ ಸಾಯುವ ಅವಕಾಶವನ್ನು ಈ ಕಾನೂನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಪ್ರಗತಿಪರ ರಾಜ್ಯವಾಗಿದ್ದು, ನ್ಯಾಯಯುತ ಸಮಾಜಕ್ಕಾಗಿ ಉದಾರ ಮತ್ತು ಸಮಾನ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಾವು ಯಾವಾಗಲೂ ಮುಂಚೂಣಿಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ರೋಗಿಯು ಘನತೆಯಿಂದ ಸಾಯುವ ಹಕ್ಕಿನ ಸಂಬಂಧ ಜಿಲ್ಲಾ ಮಟ್ಟದಲ್ಲಿ ತಜ್ಞ ವೈದ್ಯರನ್ನೊಳಗೊಂಡ ಸಮಿತಿ ರಚಿಸಲಾಗುತ್ತದೆ. ಈ ಸಮಿತಿ ರೋಗಿಗೆ ಯಾವುದೇ ಚಿಕಿತ್ಸೆ ನೀಡಿದರೂ ಬದುಕುಳಿಯಲ್ಲ ಎಂದು ದೃಢಪಡಿಸಿದ ನಂತರ ಘನತೆಯಿಂದ ಸಾಯಲು ಅವಕಾಶ ಕೊಡುವ ನಿರ್ಧಾರ ಕೈಗೊಳ್ಳುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟ್ವಿಟ್‌ನಲ್ಲಿ ತಿಳಿಸಿದ್ದಾರೆ.

ಒಬ್ಬ ರೋಗಿಯು ಗಂಭೀರ ಕಾಯಿಲೆ ಅಸ್ವಸ್ಥನಾಗಿ ಚೇತರಿಕೆ ಅಥವಾ ಗುಣಮುಖ ಆಶಾಭಾವನೆ ಹೊಂದಿಲ್ಲದೆ ಸುದೀರ್ಘ ಚಿಕಿತ್ಸೆ ಪಡೆಯುತ್ತಿದ್ದರೆ ಹಾಗೂ ಯಾವುದೇ ಚೇತರಿಕೆ ಸಾಮರ್ಥ್ಯ ಹೊಂದಿರದ ಸಂದರ್ಭದಲ್ಲಿ ನಿಗದಿಯ ಕಾರ್ಯ-ಪೂರಕವಾಗಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯ ಪಟ್ಟಿತ್ತು ಈಗ ರಾಜ್ಯ ಸರ್ಕಾರ ಈ ನಿರ್ದೇಶನ ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago