ರಾಜ್ಯ

ವಿಧಾನಸೌಧಕ್ಕೆ ದೀಪಾಲಂಕಾರ: ಸಿಎಂ ಏ.6 ರಂದು ಲೋಕಾರ್ಪಣೆ

ಬೆಂಗಳೂರು: ಜನಾಕರ್ಷಣೆ ಮಾಡುವ ಉದ್ದೇಶದಿಂದ ವಿಧಾನಸೌಧಕ್ಕೆ ನೂತನವಾಗಿ ಅಳವಡಿಸಿರುವ ವರ್ಣರಂಜಿತ ದೀಪಗಳ ಲೋಕಾರ್ಪಣೆ ಏ.6 ರಂದು ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಸ್ಪೀಕರ್‌ ಯುಟಿ ಖಾದರ್‌ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ವಿಧಾನಸೌಧ ಪ್ರಜಾಪ್ರಭುತ್ವದ ದೇಗುಲ. ಜನಾಕರ್ಷಣೆ ಮಾಡುವ ಉದ್ದೇಶದಿಂದ ಸರ್ಕಾರಕ್ಕೆ ಮನವಿ ಮಾಡಿದ್ದೆ ಎಂದರು.

ಈಗಾಗಲೇ ಬೆಳಗಾವಿಯಲ್ಲಿ ವಾರದ ಕೊನೆಯ ದಿನಗಳಲ್ಲಿ ದೀಪಾಲಂಕಾರ ಆಕರ್ಷಣೆ ಆಗುತ್ತಿದೆ. ಈಗ ವಿಧಾನಸೌಧದಲ್ಲೂ ಅದೇ ರೀತಿ ಮಾಡಲಾಗುವುದು. 6 ರಿಂದ 10 ಗಂಟೆವರೆಗೆ ದೀಪಾಲಂಕಾರ ಇರುತ್ತದೆ. ವಿಶೇಷ ದಿನಗಳಲ್ಲಿ ಹಣ ಖರ್ಚು ಆಗುತ್ತಿದ್ದಕ್ಕೆ ಈಗ ಬ್ರೇಕ್‌ ಬಿದ್ದಿದೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಏ.6 ರಂದು ದೀಪಾಲಂಕಾರ ಉದ್ಘಾಟನೆ ನಡೆಸಲಿದ್ದು, ಅಂದಿನ ದಿನ ಸಾರ್ವಜನಿಕರಿಗೆ ಅವಕಾಶ ಕೊಡುತ್ತೇವೆ. ಭಾನುವಾರ ಪೊಲೀಸ್‌ ಬ್ಯಾಂಡ್‌ ಒಂದೊಂದು ದಿನ ಒಂದೊಂದು ಸಾಂಸ್ಕೃತಿಕ ಕಾರ್ಯಕ್ರಮ ಇರುತ್ತದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರ ವಿಧಾನಸೌಧ ಪ್ರವೇಶ ಹಾಗೂ ಭದ್ರತೆಯ ಕುರಿತು ಮಾತನಾಡಿದ ಅವರು, ಸರ್ಕಾರಕ್ಕೆ ಸಲಹೆ ಸೂಚನೆ ನೀಡಿದ್ದೇವೆ. ಬ್ಯಾಗ್‌ ಜೊತೆ ಬರಬಾರದು, ಆಧಾರ್‌ ಕಾರ್ಡ್‌ ತರುವಂತೆ ಸೂಚನೆ, ಬ್ಯಾರಿಕೇಡ್‌ ಹಾಕಿ ಬಂದೋಬಸ್ತ್‌ ಮಾಡುವಂತೆ ಸೂಚಿಸಿದ್ದೇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

1 hour ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

1 hour ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

2 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

2 hours ago

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…

3 hours ago

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

3 hours ago