ರಾಜ್ಯ

ವಿಧಾನಸೌಧಕ್ಕೆ ದೀಪಾಲಂಕಾರ: ಸಿಎಂ ಏ.6 ರಂದು ಲೋಕಾರ್ಪಣೆ

ಬೆಂಗಳೂರು: ಜನಾಕರ್ಷಣೆ ಮಾಡುವ ಉದ್ದೇಶದಿಂದ ವಿಧಾನಸೌಧಕ್ಕೆ ನೂತನವಾಗಿ ಅಳವಡಿಸಿರುವ ವರ್ಣರಂಜಿತ ದೀಪಗಳ ಲೋಕಾರ್ಪಣೆ ಏ.6 ರಂದು ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಸ್ಪೀಕರ್‌ ಯುಟಿ ಖಾದರ್‌ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ವಿಧಾನಸೌಧ ಪ್ರಜಾಪ್ರಭುತ್ವದ ದೇಗುಲ. ಜನಾಕರ್ಷಣೆ ಮಾಡುವ ಉದ್ದೇಶದಿಂದ ಸರ್ಕಾರಕ್ಕೆ ಮನವಿ ಮಾಡಿದ್ದೆ ಎಂದರು.

ಈಗಾಗಲೇ ಬೆಳಗಾವಿಯಲ್ಲಿ ವಾರದ ಕೊನೆಯ ದಿನಗಳಲ್ಲಿ ದೀಪಾಲಂಕಾರ ಆಕರ್ಷಣೆ ಆಗುತ್ತಿದೆ. ಈಗ ವಿಧಾನಸೌಧದಲ್ಲೂ ಅದೇ ರೀತಿ ಮಾಡಲಾಗುವುದು. 6 ರಿಂದ 10 ಗಂಟೆವರೆಗೆ ದೀಪಾಲಂಕಾರ ಇರುತ್ತದೆ. ವಿಶೇಷ ದಿನಗಳಲ್ಲಿ ಹಣ ಖರ್ಚು ಆಗುತ್ತಿದ್ದಕ್ಕೆ ಈಗ ಬ್ರೇಕ್‌ ಬಿದ್ದಿದೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಏ.6 ರಂದು ದೀಪಾಲಂಕಾರ ಉದ್ಘಾಟನೆ ನಡೆಸಲಿದ್ದು, ಅಂದಿನ ದಿನ ಸಾರ್ವಜನಿಕರಿಗೆ ಅವಕಾಶ ಕೊಡುತ್ತೇವೆ. ಭಾನುವಾರ ಪೊಲೀಸ್‌ ಬ್ಯಾಂಡ್‌ ಒಂದೊಂದು ದಿನ ಒಂದೊಂದು ಸಾಂಸ್ಕೃತಿಕ ಕಾರ್ಯಕ್ರಮ ಇರುತ್ತದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರ ವಿಧಾನಸೌಧ ಪ್ರವೇಶ ಹಾಗೂ ಭದ್ರತೆಯ ಕುರಿತು ಮಾತನಾಡಿದ ಅವರು, ಸರ್ಕಾರಕ್ಕೆ ಸಲಹೆ ಸೂಚನೆ ನೀಡಿದ್ದೇವೆ. ಬ್ಯಾಗ್‌ ಜೊತೆ ಬರಬಾರದು, ಆಧಾರ್‌ ಕಾರ್ಡ್‌ ತರುವಂತೆ ಸೂಚನೆ, ಬ್ಯಾರಿಕೇಡ್‌ ಹಾಕಿ ಬಂದೋಬಸ್ತ್‌ ಮಾಡುವಂತೆ ಸೂಚಿಸಿದ್ದೇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago