ರಾಜ್ಯ

ಹಿಮಾಚಲ ಸರ್ಕಾರದಂತೆ, ರಾಜ್ಯ ಸರ್ಕಾರ ಗ್ಯಾರಂಟಿ ಹಿಂಪಡೆದರೆ ಆಶ್ಚರ್ಯವೇನಿಲ್ಲ: ವಿಜಯೇಂದ್ರ

ಬೆಂಗಳೂರು: ಹಿಮಾಚಲ ಪ್ರದೇಶದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಇಂದು ಹಿಂತೆಗೆದುಕೊಳ್ಳುತ್ತಿದೆ. ಅದರಂತೆಯೇ ಕರ್ನಾಟಕ ಸರ್ಕಾರ ಕೂಡ ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆದರೆ ಆಶ್ಚರ್ಯವೇನಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸರ್ಕಾರದ ಆರ್ಥಿಕ ಸಂಪನ್ಮೂಲವನ್ನು ಆಧರಿಸಿ ಸಮತೋಲನ ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ತಾವು ನೀಡುವ ಪೊಳ್ಳು ಭರವಸೆಗಳಿಗೆ ಹಣ ಒದಗಿಸಲಾಗದೇ ಯೋಜನೆಗಳು ಹೇಗೆ ವೈಫಲ್ಯ ಸಾಧಿಸುತ್ತವೆ ಎನ್ನುವುದಕ್ಕೆ ಕಾಂಗ್ರೆಸ್ ಆಡಳಿತದ ಹಿಮಾಚಲ ಪ್ರದೇಶ ಸರ್ಕಾರ ಸಾಕ್ಷಿ ಒದಗಿಸಿದೆ ಎಂದು ಟೀಕಿಸಿದ್ದಾರೆ.

ಕರ್ನಾಟಕದಲ್ಲೂ ಸಹ ಪಂಚ ಗ್ಯಾರಂಟಿಗಳನ್ನು ನಿರ್ವಹಿಸುವಲ್ಲಿ ಗೊಂದಲಗಳನ್ನು ಸೃಷ್ಟಿಸಿಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯಲ್ಲಿ ಈಗಾಗಲೇ ನಷ್ಟವನ್ನು ಅನುಭವಿಸಿದ್ದು, ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳಿಗೆ ಬಡ್ಡಿರಹಿತವಾಗಿ 2 ಸಾವಿರ ಕೋಟಿ ರೂ ಸಾಲ ನೀಡಲು ಮುಂದಾಗಿದೆ.
ಗೃಹ ಜ್ಯೋತಿ ಯೋಜನೆಯ ನಷ್ಟವನ್ನು ಸರಿದೂಗಿಸಲು ವಾಣಿಜ್ಯ ಹಾಗೂ ಉತ್ಪಾದಕ ವಲಯದ ಮೇಲೆ ವಿದ್ಯುತ್ ದರ ಹೆಚ್ಚಿಸಿರುವುದರ ಪರಿಣಾಮ, ಪರೋಕ್ಷವಾಗಿ ಜನ ಸಾಮಾನ್ಯರು ಇದರ ಬಿಸಿ ಅನುಭವಿಸುವಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಹಣ ಹೊಂದಿಸಲಾಗದೆ ಚುನಾವಣಾ ಸಂದರ್ಭದಲ್ಲಿ ಮಾತ್ರ ಉಳಿಸಿಕೊಂಡಿರುವ ಬಾಕಿ ಕಂತುಗಳನ್ನು ಪಾವತಿಸಿ ಯೋಜನೆಯನ್ನು ಮತಬ್ಯಾಂಕ್ ಸೃಷ್ಟಿಸಿಕೊಳ್ಳಲು ಮಾತ್ರ ಬಳಸಿಕೊಳ್ಳಲಾಗುತ್ತಿದೆ. ಯುವನಿಧಿ ಯೋಜನೆ ಯುವ ಜನರ ಪಾಲಿಗೆ ಗಗನಕುಸುಮವಾಗಿಯೇ ಉಳಿದಿದೆ. ಅಲ್ಲದೇ ಸಮಾಜ ಹಾಗೂ ನಾಡನ್ನು ಕಟ್ಟುವ ಮಾನವ ಸಂಪನ್ಮೂಲದ ಪ್ರಮುಖ ಭಾಗವಾಗಿರುವ ರೈತಾಪಿ ವರ್ಗ, ಶ್ರಮಿಕರು,ಯುವ ಜನರು, ವಿದ್ಯಾರ್ಥಿಗಳ ಹಾಗೂ ಮಹಿಳೆಯರ ಭವಿಷ್ಯಕ್ಕಾಗಿ ಯಾವುದೇ ಯೋಜನೆ ರೂಪಿಸದೇ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಆಡಳಿತ ನೀಡುವ ಮೂಲಕ ತನ್ನ ಖಜಾನೆ ಬರಿದು ಮಾಡಿಕೊಂಡಿದೆ. ಹೀಗಾಗಿ ಇದು ನಾಡಿನ ಜನರಿಗೆ ತಿಳಿಯದ ವಿಷಯವೇನಲ್ಲ, ಏಕೆಂದರೆ ಇದರ ಪರಿಣಾಮವನ್ನು ತೆರಿಗೆದಾರರು ನಿತ್ಯ ಅನುಭವಿಸುತ್ತಲೇ ಇದ್ದಾರೆ ಎಂದು ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಹಿಂತೆಗೆದುಕೊಳ್ಳುತ್ತಿರುವ ಹಿಮಾಚಲ ಸರ್ಕಾರದ ಸ್ಥಿತಿ ಕರ್ನಾಟಕಕ್ಕೆ ಬಂದರೂ ಅದರಲ್ಲಿ ಆಶ್ಚರ್ಯವೇನಿಲ್ಲ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಜನತೆಗೆ ನೀಡಿರುವ ವಚನ ಪಾಲನೆ ಹಾಗೂ ಜಾರಿಗೊಳಿಸಿರುವ ಯೋಜನೆಯನ್ನು ಸರಿದೂಗಿಸುವ ಬದ್ಧತೆ ಇದ್ದರೆ ಈ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ರಾಜ್ಯದ ಆರ್ಥಿಕ ಸಂಪನ್ಮೂಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಸವಾಲ್‌ ಹಾಕಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

2 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

3 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

4 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

5 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

6 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

7 hours ago