ವಿಜಯಪುರ: ಲಿಂಗಾಯತ ಸಮಾಜದ ಎಲ್ಲಾ ಒಳ ಪಂಗಡಗಳಿಗೂ ಮೀಸಲಾತಿ ಸಿಗಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರತಿಪಾದಿಸಿದರು.
ಲಿಂಗಾಯತ ಸಮಾಜದ ಎಲ್ಲಾ ಉಪ ಪಂಗಡಗಳಿಗೆ ಒಂದೇ ಸೂರಿನಡಿ ಮೀಸಲಾತಿ ಸಿಗಬೇಕು. ಒಕ್ಕಲಿಗರಿಗೆ ಸಿಕ್ಕ ಮಾದರಿಯಲ್ಲಿ ನಮಗೂ ಮೀಸಲಾತಿ ಸಿಗಬೇಕು ಎಂದು ಆಗ್ರಹಿಸಿದರು.
ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕರೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಸಿಗುತ್ತಿದ್ದವು. ಆದರೆ, ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆ ಸಿಗುವುದರಿಂದ ಆಗುವ ಲಾಭದ ಕುರಿತು ಜನರು ಸರಿಯಾಗಿ ಅರ್ಥೈಸಿಕೊಳ್ಳಲಿಲ್ಲ ಎಂದು ಹೇಳಿದರು.
ಇನ್ನು ಹಿಂದು ಧರ್ಮ ಬೇರೆ, ಲಿಂಗಾಯತ ಧರ್ಮ ಬೇರೆ ಎಂಬ ಸಾಣೆಹಳ್ಳಿ ಶ್ರೀಗಳ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಮಾತನಾಡಿದರೆ ರಾಜಕೀಯ ಬಣ್ಣ ಕೊಡುತ್ತಾರೆ ಎಂದರು.
ಜನ ಗಣತಿ ಸಂದರ್ಭದಲ್ಲಿ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಹಾಗೂ ಜಾತಿ ಕಾಲಂನಲ್ಲಿ ಜಾತಿಯ ಹೆಸರು ಬರೆಸಲು ತೀರ್ಮಾನಿಸಿದ್ದಾರೆ ಎಂದರು.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…