ಬೆಂಗಳೂರು : ಗ್ರಾಮ ಲೆಕ್ಕಿಗರ ಮನೆ ಬಾಗಿಲಿಗೆ ತೆರಳಿ ಆರ್ಟಿಸಿ-ಆಧಾರ್ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್ ಲಿಂಕ್ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬಾಕಿ ಪೋಡಿ ಹಾಗೂ ದುರಸ್ತಿ ಪ್ರಕರಣ ಇತ್ಯರ್ಥಕ್ಕೆ ಮೊದಲು ನಿಖರವಾದ ಆಕಾರ್ ಬಂದ್ ಮಾಹಿತಿ ಪಡೆಯಬೇಕು.
ನಿಖರವಾದ ಆಕಾರ್ ಬಂದ್ ಇಲ್ಲದೇ ಆರ್ಟಿಸಿ ಜೊತೆಗೆ ಜೋಡಣೆ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ 65 ಲಕ್ಷ ಆಕಾರ್ ಬಂದ್ ಡಿಜಿಟಲೀಕರಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಆರ್ ಟಿಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು, ಈವರೆಗೆ ೧೫ ಲಕ್ಷ ಆರ್ ಟಿಸಿ ಮಾಲೀಕರನ್ನು ಸಂಪರ್ಕಿಸಲಾಗಿದೆ. ಮುಂದಿನ ಎರಡು-ಮೂರು ತಿಂಗಳಲ್ಲಿ ಎಲ್ಲ ಆರ್ ಟಿಸಿ ಮಾಲೀಕರನ್ನು ತಲುಪಲು ರೂಪುರೇಷೆ ಸಿದ್ದಪಡಿಸಲಾಗಿದೆ ಎಂದು ಹೇಳಿದ್ದಾರೆ
ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…
ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…
ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…
ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…
ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…
ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…