ರಾಜ್ಯ

ಆರ್‌ಟಿಸಿ-ಆಧಾರ್‌ ಕಾರ್ಡ್‌ ಜೋಡಣೆ : 88 ಸಾವಿರ ಆರ್‌ಟಿಸಿಗಳಲ್ಲಿ ಕೃಷಿ ಭೂಮಿ ಪತ್ತೆ !

ಬೆಂಗಳೂರು : ಗ್ರಾಮ ಲೆಕ್ಕಿಗರ ಮನೆ ಬಾಗಿಲಿಗೆ ತೆರಳಿ ಆರ್‌ಟಿಸಿ-ಆಧಾರ್‌ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್‌ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್‌ ಲಿಂಕ್‌ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬಾಕಿ ಪೋಡಿ ಹಾಗೂ ದುರಸ್ತಿ ಪ್ರಕರಣ ಇತ್ಯರ್ಥಕ್ಕೆ ಮೊದಲು ನಿಖರವಾದ ಆಕಾರ್‌ ಬಂದ್‌ ಮಾಹಿತಿ ಪಡೆಯಬೇಕು.

ನಿಖರವಾದ ಆಕಾರ್‌ ಬಂದ್‌ ಇಲ್ಲದೇ ಆರ್‌ಟಿಸಿ ಜೊತೆಗೆ ಜೋಡಣೆ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ 65 ಲಕ್ಷ ಆಕಾರ್‌ ಬಂದ್‌ ಡಿಜಿಟಲೀಕರಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯಾದ್ಯಂತ ಆರ್‌ ಟಿಸಿ-ಆಧಾರ್‌ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು, ಈವರೆಗೆ ೧೫ ಲಕ್ಷ ಆರ್‌ ಟಿಸಿ ಮಾಲೀಕರನ್ನು ಸಂಪರ್ಕಿಸಲಾಗಿದೆ. ಮುಂದಿನ ಎರಡು-ಮೂರು ತಿಂಗಳಲ್ಲಿ ಎಲ್ಲ ಆರ್‌ ಟಿಸಿ ಮಾಲೀಕರನ್ನು ತಲುಪಲು ರೂಪುರೇಷೆ ಸಿದ್ದಪಡಿಸಲಾಗಿದೆ ಎಂದು ಹೇಳಿದ್ದಾರೆ

andolana

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

1 hour ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

14 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

15 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago