ಬೆಂಗಳೂರು: ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲು ಮದ್ಯ ಉತ್ಪಾದಕರು ತಕರಾರು ಎತ್ತಿರುವ ಕಾರಣದಿಂದ ಮದ್ಯದ ದರಗಳ ಇಳಿಕೆ ಪ್ರಕ್ರಿಯೆಯನ್ನು ಅಬಕಾರಿ ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ.
ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ ಮತ್ತು ಇತರ ರಾಜ್ಯಗಳಿಗೆ ಸಮನಾಗಿ ಮದ್ಯದ ಘೋಷಿತ ದರ ನಿಗದಿಪಡಿಸುವ ಮೂಲಕ ದರ ಇಳಿಕೆಗೆ ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆ ಎರಡು ಕರಡು ಅಧಿಸೂಚನೆಗಳನ್ನು ಹೊರಡಿಸಿತ್ತು.
ವಿವಿಧ ರಾಜ್ಯಗಳಿಗೆ ಕಡಿಮೆ ಮೊತ್ತದ ಘೋಷಿತ ದರ ನಿಗದಿಪಡಿಸಿರುವ ಮದ್ಯ ಉತ್ಪಾದನಾ ಕಂಪನಿಗಳು, ಕರ್ನಾಟಕದಲ್ಲಿ ಹೆಚ್ಚಿನ ಮೊತ್ತದ ಘೋಷಿತ ದರ ನಿಗದಿಪಡಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಲೆಕ್ಕಪರಿಶೋಧಕರು ಮತ್ತು ವೆಚ್ಚ ಪರಿಶೋಧಕರ ಪ್ರಮಾಣಪತ್ರಗಳೊಂದಿಗೆ ಪ್ರತಿ ಬ್ರಾಂಡ್ ಮದ್ಯದ ಉತ್ಪಾದನಾ ವೆಚ್ಚಕ್ಕೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳುವುದನ್ನು ಕಡ್ಡಾಯಗೊಳಿಸಲು ಇಲಾಖೆ ಮುಂದಾಗಿತ್ತು.
ಹೆಚ್ಚುವರಿ ಅಬಕಾರಿ ತೆರಿಗೆ ಇಳಿಸುವುದು ಸರ್ಕಾರದ ನಿರ್ಧಾರ. ಆದರೆ, ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲಾಗದು ಎಂದು ಹಲವು ಉತ್ಪಾದಕರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇದರಿಂದ ಭವಿಷ್ಯದಲ್ಲಿ ಕಾನೂನು ತೊಡಕುಂಟಾಗುವ ಸಾಧ್ಯತೆಯಿದೆ. ಆ ಬಗ್ಗೆ ಮತ್ತಷ್ಟು ಪರಿಶೀಲಿಸಲು ದರ ಇಳಿಕೆಯ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…