ಬೆಂಗಳೂರು: ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲು ಮದ್ಯ ಉತ್ಪಾದಕರು ತಕರಾರು ಎತ್ತಿರುವ ಕಾರಣದಿಂದ ಮದ್ಯದ ದರಗಳ ಇಳಿಕೆ ಪ್ರಕ್ರಿಯೆಯನ್ನು ಅಬಕಾರಿ ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ.
ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ ಮತ್ತು ಇತರ ರಾಜ್ಯಗಳಿಗೆ ಸಮನಾಗಿ ಮದ್ಯದ ಘೋಷಿತ ದರ ನಿಗದಿಪಡಿಸುವ ಮೂಲಕ ದರ ಇಳಿಕೆಗೆ ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆ ಎರಡು ಕರಡು ಅಧಿಸೂಚನೆಗಳನ್ನು ಹೊರಡಿಸಿತ್ತು.
ವಿವಿಧ ರಾಜ್ಯಗಳಿಗೆ ಕಡಿಮೆ ಮೊತ್ತದ ಘೋಷಿತ ದರ ನಿಗದಿಪಡಿಸಿರುವ ಮದ್ಯ ಉತ್ಪಾದನಾ ಕಂಪನಿಗಳು, ಕರ್ನಾಟಕದಲ್ಲಿ ಹೆಚ್ಚಿನ ಮೊತ್ತದ ಘೋಷಿತ ದರ ನಿಗದಿಪಡಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಲೆಕ್ಕಪರಿಶೋಧಕರು ಮತ್ತು ವೆಚ್ಚ ಪರಿಶೋಧಕರ ಪ್ರಮಾಣಪತ್ರಗಳೊಂದಿಗೆ ಪ್ರತಿ ಬ್ರಾಂಡ್ ಮದ್ಯದ ಉತ್ಪಾದನಾ ವೆಚ್ಚಕ್ಕೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳುವುದನ್ನು ಕಡ್ಡಾಯಗೊಳಿಸಲು ಇಲಾಖೆ ಮುಂದಾಗಿತ್ತು.
ಹೆಚ್ಚುವರಿ ಅಬಕಾರಿ ತೆರಿಗೆ ಇಳಿಸುವುದು ಸರ್ಕಾರದ ನಿರ್ಧಾರ. ಆದರೆ, ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲಾಗದು ಎಂದು ಹಲವು ಉತ್ಪಾದಕರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇದರಿಂದ ಭವಿಷ್ಯದಲ್ಲಿ ಕಾನೂನು ತೊಡಕುಂಟಾಗುವ ಸಾಧ್ಯತೆಯಿದೆ. ಆ ಬಗ್ಗೆ ಮತ್ತಷ್ಟು ಪರಿಶೀಲಿಸಲು ದರ ಇಳಿಕೆಯ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…