ರಾಜ್ಯ

ಎಣ್ಣೆ ಪ್ರಿಯರಿಗೆ ಬೇಸರ: ಮದ್ಯದ ದರ ಇಳಿಕೆಗೆ ತಾತ್ಕಾಲಿಕ ತಡೆ

ಬೆಂಗಳೂರು: ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲು ಮದ್ಯ ಉತ್ಪಾದಕರು ತಕರಾರು ಎತ್ತಿರುವ ಕಾರಣದಿಂದ ಮದ್ಯದ ದರಗಳ ಇಳಿಕೆ ಪ್ರಕ್ರಿಯೆಯನ್ನು ಅಬಕಾರಿ ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ.

ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ ಮತ್ತು ಇತರ ರಾಜ್ಯಗಳಿಗೆ ಸಮನಾಗಿ ಮದ್ಯದ ಘೋಷಿತ ದರ ನಿಗದಿಪಡಿಸುವ ಮೂಲಕ ದರ ಇಳಿಕೆಗೆ ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆ ಎರಡು ಕರಡು ಅಧಿಸೂಚನೆಗಳನ್ನು ಹೊರಡಿಸಿತ್ತು.

ವಿವಿಧ ರಾಜ್ಯಗಳಿಗೆ ಕಡಿಮೆ ಮೊತ್ತದ ಘೋಷಿತ ದರ ನಿಗದಿಪಡಿಸಿರುವ ಮದ್ಯ ಉತ್ಪಾದನಾ ಕಂಪನಿಗಳು, ಕರ್ನಾಟಕದಲ್ಲಿ ಹೆಚ್ಚಿನ ಮೊತ್ತದ ಘೋಷಿತ ದರ ನಿಗದಿಪಡಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಲೆಕ್ಕಪರಿಶೋಧಕರು ಮತ್ತು ವೆಚ್ಚ ಪರಿಶೋಧಕರ ಪ್ರಮಾಣಪತ್ರಗಳೊಂದಿಗೆ ಪ್ರತಿ ಬ್ರಾಂಡ್‌ ಮದ್ಯದ ಉತ್ಪಾದನಾ ವೆಚ್ಚಕ್ಕೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳುವುದನ್ನು ಕಡ್ಡಾಯಗೊಳಿಸಲು ಇಲಾಖೆ ಮುಂದಾಗಿತ್ತು.

ಹೆಚ್ಚುವರಿ ಅಬಕಾರಿ ತೆರಿಗೆ ಇಳಿಸುವುದು ಸರ್ಕಾರದ ನಿರ್ಧಾರ. ಆದರೆ, ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲಾಗದು ಎಂದು ಹಲವು ಉತ್ಪಾದಕರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇದರಿಂದ ಭವಿಷ್ಯದಲ್ಲಿ ಕಾನೂನು ತೊಡಕುಂಟಾಗುವ ಸಾಧ್ಯತೆಯಿದೆ. ಆ ಬಗ್ಗೆ ಮತ್ತಷ್ಟು ಪರಿಶೀಲಿಸಲು ದರ ಇಳಿಕೆಯ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

2 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

15 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

15 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

15 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

15 hours ago