ಬೆಂಗಳೂರು: ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲು ಮದ್ಯ ಉತ್ಪಾದಕರು ತಕರಾರು ಎತ್ತಿರುವ ಕಾರಣದಿಂದ ಮದ್ಯದ ದರಗಳ ಇಳಿಕೆ ಪ್ರಕ್ರಿಯೆಯನ್ನು ಅಬಕಾರಿ ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ.
ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ ಮತ್ತು ಇತರ ರಾಜ್ಯಗಳಿಗೆ ಸಮನಾಗಿ ಮದ್ಯದ ಘೋಷಿತ ದರ ನಿಗದಿಪಡಿಸುವ ಮೂಲಕ ದರ ಇಳಿಕೆಗೆ ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆ ಎರಡು ಕರಡು ಅಧಿಸೂಚನೆಗಳನ್ನು ಹೊರಡಿಸಿತ್ತು.
ವಿವಿಧ ರಾಜ್ಯಗಳಿಗೆ ಕಡಿಮೆ ಮೊತ್ತದ ಘೋಷಿತ ದರ ನಿಗದಿಪಡಿಸಿರುವ ಮದ್ಯ ಉತ್ಪಾದನಾ ಕಂಪನಿಗಳು, ಕರ್ನಾಟಕದಲ್ಲಿ ಹೆಚ್ಚಿನ ಮೊತ್ತದ ಘೋಷಿತ ದರ ನಿಗದಿಪಡಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಲೆಕ್ಕಪರಿಶೋಧಕರು ಮತ್ತು ವೆಚ್ಚ ಪರಿಶೋಧಕರ ಪ್ರಮಾಣಪತ್ರಗಳೊಂದಿಗೆ ಪ್ರತಿ ಬ್ರಾಂಡ್ ಮದ್ಯದ ಉತ್ಪಾದನಾ ವೆಚ್ಚಕ್ಕೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳುವುದನ್ನು ಕಡ್ಡಾಯಗೊಳಿಸಲು ಇಲಾಖೆ ಮುಂದಾಗಿತ್ತು.
ಹೆಚ್ಚುವರಿ ಅಬಕಾರಿ ತೆರಿಗೆ ಇಳಿಸುವುದು ಸರ್ಕಾರದ ನಿರ್ಧಾರ. ಆದರೆ, ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲಾಗದು ಎಂದು ಹಲವು ಉತ್ಪಾದಕರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇದರಿಂದ ಭವಿಷ್ಯದಲ್ಲಿ ಕಾನೂನು ತೊಡಕುಂಟಾಗುವ ಸಾಧ್ಯತೆಯಿದೆ. ಆ ಬಗ್ಗೆ ಮತ್ತಷ್ಟು ಪರಿಶೀಲಿಸಲು ದರ ಇಳಿಕೆಯ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…