ರಾಜ್ಯ

ಮದ್ಯದ ದರ ಏರಿಕೆ ಶಾಕ್‌: ದುಬಾರಿಯಾಯ್ತು ಬಡವರ ಫೇವರೆಟ್ ಬ್ರ್ಯಾಂಡ್

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಬರೋಬ್ಬರಿ 193 ಕೋಟಿ ಆದಾಯ ಗಳಿಕೆ ಕಂಡು ಮಂದಹಾಸ ಬೀರಿದೆ. ಇದರ ಬೆನ್ನಲ್ಲೆ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.

ಇಂದಿನಿಂದ (ಜನವರಿ ೨) ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆ‌ಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ‌ ಕೆಲ ಬ್ರ್ಯಾಂಡ್​ಗಳ ದರ ಹೆಚ್ಚಿಸಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ.

ಈಗಾಗಲೇ 17% ರಷ್ಟು ಎಲ್ಲಾ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರ ಹೆಚ್ಚಳ ಮಾಡಲಾಗಿದೆ. ಮದ್ಯ ಉತ್ವಾದನ‌‌‌ ಕಂಪನಿಗಳು ಕ್ವಾಟರ್​ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ. ಉತ್ಪಾದನ ವೆಚ್ಚ ಅಧಿಕವಾಗಿದೆ ಎಂದು ಮದ್ಯ ಉತ್ವನ್ನ ಕಂಪನಿಗಳು ಸಮಜಾಯಿಸಿ ನೀಡಿವೆ.

ಇಂದಿನಿಂದ ರಾಜ್ಯಾದ್ಯಂತ ಬಡವರ ಈ ಮೂರು ಫೇವರೆಟ್ ಬ್ರ್ಯಾಂಡ್​ಗಳ ಮೇಲಿನ ದರ ಹೆಚ್ಚಳವಾಗಿದೆ. ಈಗಾಗಲೇ ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಸಂದೇಶ ಕಳುಹಿಸಿವೆ. ರಾಜ್ಯದ ಕೆಳ ವರ್ಗದ ಜನ ಅತಿ ಹೆಚ್ಚು ಸೇವಿಸುವ ಬ್ರ್ಯಾಂಡ್​ಗಳ ದರ ಏರಿಕೆಯಾಗಿದೆ.

ಸದ್ಯ ಮದ್ಯ ಏರಿಕೆ ಹಿನ್ನೆಲೆ ಅಬಕಾರಿ ಇಲಾಖೆ ಹಾಗೂ ಕಂಪನಿಗಳ ವಿರುದ್ಧ ಮದ್ಯ ಪ್ರಿಯರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಇನ್ನು ಮತ್ತೊಂದೆಡೆ ಹೀಗೆ ರೇಟ್ ಹೆಚ್ಚಳವಾದ್ರೆ ಮದ್ಯ ಮಾರಾಟದಲ್ಲಿ ಕುಸಿತ ಆಗುತ್ತೆ ಎಂದು ಬಾರ್ ಮಾಲೀಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಷ್ಟೃತ ದರ
ಓಟಿ(180 ಎಂಎಲ್): ಈ ಹಿಂದೆ 90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.
ಬಿಪಿ(180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.
8PM(180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ

andolanait

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

2 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

3 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

3 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

3 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

4 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

4 hours ago