ರಾಜ್ಯ

ಮದ್ಯದ ದರ ಏರಿಕೆ ಶಾಕ್‌: ದುಬಾರಿಯಾಯ್ತು ಬಡವರ ಫೇವರೆಟ್ ಬ್ರ್ಯಾಂಡ್

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಬರೋಬ್ಬರಿ 193 ಕೋಟಿ ಆದಾಯ ಗಳಿಕೆ ಕಂಡು ಮಂದಹಾಸ ಬೀರಿದೆ. ಇದರ ಬೆನ್ನಲ್ಲೆ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.

ಇಂದಿನಿಂದ (ಜನವರಿ ೨) ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆ‌ಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ‌ ಕೆಲ ಬ್ರ್ಯಾಂಡ್​ಗಳ ದರ ಹೆಚ್ಚಿಸಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ.

ಈಗಾಗಲೇ 17% ರಷ್ಟು ಎಲ್ಲಾ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರ ಹೆಚ್ಚಳ ಮಾಡಲಾಗಿದೆ. ಮದ್ಯ ಉತ್ವಾದನ‌‌‌ ಕಂಪನಿಗಳು ಕ್ವಾಟರ್​ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ. ಉತ್ಪಾದನ ವೆಚ್ಚ ಅಧಿಕವಾಗಿದೆ ಎಂದು ಮದ್ಯ ಉತ್ವನ್ನ ಕಂಪನಿಗಳು ಸಮಜಾಯಿಸಿ ನೀಡಿವೆ.

ಇಂದಿನಿಂದ ರಾಜ್ಯಾದ್ಯಂತ ಬಡವರ ಈ ಮೂರು ಫೇವರೆಟ್ ಬ್ರ್ಯಾಂಡ್​ಗಳ ಮೇಲಿನ ದರ ಹೆಚ್ಚಳವಾಗಿದೆ. ಈಗಾಗಲೇ ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಸಂದೇಶ ಕಳುಹಿಸಿವೆ. ರಾಜ್ಯದ ಕೆಳ ವರ್ಗದ ಜನ ಅತಿ ಹೆಚ್ಚು ಸೇವಿಸುವ ಬ್ರ್ಯಾಂಡ್​ಗಳ ದರ ಏರಿಕೆಯಾಗಿದೆ.

ಸದ್ಯ ಮದ್ಯ ಏರಿಕೆ ಹಿನ್ನೆಲೆ ಅಬಕಾರಿ ಇಲಾಖೆ ಹಾಗೂ ಕಂಪನಿಗಳ ವಿರುದ್ಧ ಮದ್ಯ ಪ್ರಿಯರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಇನ್ನು ಮತ್ತೊಂದೆಡೆ ಹೀಗೆ ರೇಟ್ ಹೆಚ್ಚಳವಾದ್ರೆ ಮದ್ಯ ಮಾರಾಟದಲ್ಲಿ ಕುಸಿತ ಆಗುತ್ತೆ ಎಂದು ಬಾರ್ ಮಾಲೀಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಷ್ಟೃತ ದರ
ಓಟಿ(180 ಎಂಎಲ್): ಈ ಹಿಂದೆ 90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.
ಬಿಪಿ(180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.
8PM(180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

9 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago