ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಬರೋಬ್ಬರಿ 193 ಕೋಟಿ ಆದಾಯ ಗಳಿಕೆ ಕಂಡು ಮಂದಹಾಸ ಬೀರಿದೆ. ಇದರ ಬೆನ್ನಲ್ಲೆ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.
ಇಂದಿನಿಂದ (ಜನವರಿ ೨) ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ ಕೆಲ ಬ್ರ್ಯಾಂಡ್ಗಳ ದರ ಹೆಚ್ಚಿಸಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ.
ಈಗಾಗಲೇ 17% ರಷ್ಟು ಎಲ್ಲಾ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್ಗಳ ದರ ಹೆಚ್ಚಳ ಮಾಡಲಾಗಿದೆ. ಮದ್ಯ ಉತ್ವಾದನ ಕಂಪನಿಗಳು ಕ್ವಾಟರ್ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ. ಉತ್ಪಾದನ ವೆಚ್ಚ ಅಧಿಕವಾಗಿದೆ ಎಂದು ಮದ್ಯ ಉತ್ವನ್ನ ಕಂಪನಿಗಳು ಸಮಜಾಯಿಸಿ ನೀಡಿವೆ.
ಇಂದಿನಿಂದ ರಾಜ್ಯಾದ್ಯಂತ ಬಡವರ ಈ ಮೂರು ಫೇವರೆಟ್ ಬ್ರ್ಯಾಂಡ್ಗಳ ಮೇಲಿನ ದರ ಹೆಚ್ಚಳವಾಗಿದೆ. ಈಗಾಗಲೇ ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಸಂದೇಶ ಕಳುಹಿಸಿವೆ. ರಾಜ್ಯದ ಕೆಳ ವರ್ಗದ ಜನ ಅತಿ ಹೆಚ್ಚು ಸೇವಿಸುವ ಬ್ರ್ಯಾಂಡ್ಗಳ ದರ ಏರಿಕೆಯಾಗಿದೆ.
ಸದ್ಯ ಮದ್ಯ ಏರಿಕೆ ಹಿನ್ನೆಲೆ ಅಬಕಾರಿ ಇಲಾಖೆ ಹಾಗೂ ಕಂಪನಿಗಳ ವಿರುದ್ಧ ಮದ್ಯ ಪ್ರಿಯರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಇನ್ನು ಮತ್ತೊಂದೆಡೆ ಹೀಗೆ ರೇಟ್ ಹೆಚ್ಚಳವಾದ್ರೆ ಮದ್ಯ ಮಾರಾಟದಲ್ಲಿ ಕುಸಿತ ಆಗುತ್ತೆ ಎಂದು ಬಾರ್ ಮಾಲೀಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪರಿಷ್ಟೃತ ದರ
ಓಟಿ(180 ಎಂಎಲ್): ಈ ಹಿಂದೆ 90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.
ಬಿಪಿ(180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.
8PM(180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್ಗಳಿಗೆ ಎಲ್ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…