ರಾಜ್ಯ

ಮದ್ಯದ ದರ ಏರಿಕೆ ಶಾಕ್‌: ದುಬಾರಿಯಾಯ್ತು ಬಡವರ ಫೇವರೆಟ್ ಬ್ರ್ಯಾಂಡ್

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಬರೋಬ್ಬರಿ 193 ಕೋಟಿ ಆದಾಯ ಗಳಿಕೆ ಕಂಡು ಮಂದಹಾಸ ಬೀರಿದೆ. ಇದರ ಬೆನ್ನಲ್ಲೆ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.

ಇಂದಿನಿಂದ (ಜನವರಿ ೨) ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆ‌ಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ‌ ಕೆಲ ಬ್ರ್ಯಾಂಡ್​ಗಳ ದರ ಹೆಚ್ಚಿಸಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ.

ಈಗಾಗಲೇ 17% ರಷ್ಟು ಎಲ್ಲಾ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರ ಹೆಚ್ಚಳ ಮಾಡಲಾಗಿದೆ. ಮದ್ಯ ಉತ್ವಾದನ‌‌‌ ಕಂಪನಿಗಳು ಕ್ವಾಟರ್​ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ. ಉತ್ಪಾದನ ವೆಚ್ಚ ಅಧಿಕವಾಗಿದೆ ಎಂದು ಮದ್ಯ ಉತ್ವನ್ನ ಕಂಪನಿಗಳು ಸಮಜಾಯಿಸಿ ನೀಡಿವೆ.

ಇಂದಿನಿಂದ ರಾಜ್ಯಾದ್ಯಂತ ಬಡವರ ಈ ಮೂರು ಫೇವರೆಟ್ ಬ್ರ್ಯಾಂಡ್​ಗಳ ಮೇಲಿನ ದರ ಹೆಚ್ಚಳವಾಗಿದೆ. ಈಗಾಗಲೇ ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಸಂದೇಶ ಕಳುಹಿಸಿವೆ. ರಾಜ್ಯದ ಕೆಳ ವರ್ಗದ ಜನ ಅತಿ ಹೆಚ್ಚು ಸೇವಿಸುವ ಬ್ರ್ಯಾಂಡ್​ಗಳ ದರ ಏರಿಕೆಯಾಗಿದೆ.

ಸದ್ಯ ಮದ್ಯ ಏರಿಕೆ ಹಿನ್ನೆಲೆ ಅಬಕಾರಿ ಇಲಾಖೆ ಹಾಗೂ ಕಂಪನಿಗಳ ವಿರುದ್ಧ ಮದ್ಯ ಪ್ರಿಯರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಇನ್ನು ಮತ್ತೊಂದೆಡೆ ಹೀಗೆ ರೇಟ್ ಹೆಚ್ಚಳವಾದ್ರೆ ಮದ್ಯ ಮಾರಾಟದಲ್ಲಿ ಕುಸಿತ ಆಗುತ್ತೆ ಎಂದು ಬಾರ್ ಮಾಲೀಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಷ್ಟೃತ ದರ
ಓಟಿ(180 ಎಂಎಲ್): ಈ ಹಿಂದೆ 90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.
ಬಿಪಿ(180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.
8PM(180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ

andolanait

Recent Posts

ಬಳ್ಳಾರಿ ಫೈರಿಂಗ್‌ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್‌ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ…

16 mins ago

ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ: ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ

ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ…

50 mins ago

ಮದ್ದೂರು| ಪೊಲೀಸ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆ: ಸಹೋದ್ಯೋಗಿ ವಿರುದ್ಧ ದೂರು ದಾಖಲು

ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್‌ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ…

1 hour ago

ತಾಲ್ಲೂಕು ಕಚೇರಿಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿದರು. ಮೈಸೂರಿನ ಮಿನಿ…

2 hours ago

ಕೋಗಿಲು ಬಡಾವಣೆ ಅಕ್ರಮ ಮನೆ ತೆರವು: 26 ಜನರಿಗೆ ಮನೆ ಕೊಡಲು ಅವಕಾಶ ಎಂದ ಸಚಿವ ಜಮೀರ್‌ ಅಹಮ್ಮದ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ…

2 hours ago

ಸರಗಳ್ಳತನಕ್ಕೆ ಯತ್ನ: ಸಿಕ್ಕಿಬಿದ್ದ ಇಬ್ಬರು ಪೊಲೀಸರ ವಶಕ್ಕೆ

ವರದಿ: ಮುದ್ದುರವಿ ಮದ್ದೂರು ಮದ್ದೂರು: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದು…

3 hours ago