ರಾಜ್ಯ

ಮದ್ಯದ ದರ ಏರಿಕೆ ಶಾಕ್‌: ದುಬಾರಿಯಾಯ್ತು ಬಡವರ ಫೇವರೆಟ್ ಬ್ರ್ಯಾಂಡ್

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಬರೋಬ್ಬರಿ 193 ಕೋಟಿ ಆದಾಯ ಗಳಿಕೆ ಕಂಡು ಮಂದಹಾಸ ಬೀರಿದೆ. ಇದರ ಬೆನ್ನಲ್ಲೆ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.

ಇಂದಿನಿಂದ (ಜನವರಿ ೨) ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆ‌ಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ‌ ಕೆಲ ಬ್ರ್ಯಾಂಡ್​ಗಳ ದರ ಹೆಚ್ಚಿಸಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ.

ಈಗಾಗಲೇ 17% ರಷ್ಟು ಎಲ್ಲಾ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರ ಹೆಚ್ಚಳ ಮಾಡಲಾಗಿದೆ. ಮದ್ಯ ಉತ್ವಾದನ‌‌‌ ಕಂಪನಿಗಳು ಕ್ವಾಟರ್​ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ. ಉತ್ಪಾದನ ವೆಚ್ಚ ಅಧಿಕವಾಗಿದೆ ಎಂದು ಮದ್ಯ ಉತ್ವನ್ನ ಕಂಪನಿಗಳು ಸಮಜಾಯಿಸಿ ನೀಡಿವೆ.

ಇಂದಿನಿಂದ ರಾಜ್ಯಾದ್ಯಂತ ಬಡವರ ಈ ಮೂರು ಫೇವರೆಟ್ ಬ್ರ್ಯಾಂಡ್​ಗಳ ಮೇಲಿನ ದರ ಹೆಚ್ಚಳವಾಗಿದೆ. ಈಗಾಗಲೇ ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಸಂದೇಶ ಕಳುಹಿಸಿವೆ. ರಾಜ್ಯದ ಕೆಳ ವರ್ಗದ ಜನ ಅತಿ ಹೆಚ್ಚು ಸೇವಿಸುವ ಬ್ರ್ಯಾಂಡ್​ಗಳ ದರ ಏರಿಕೆಯಾಗಿದೆ.

ಸದ್ಯ ಮದ್ಯ ಏರಿಕೆ ಹಿನ್ನೆಲೆ ಅಬಕಾರಿ ಇಲಾಖೆ ಹಾಗೂ ಕಂಪನಿಗಳ ವಿರುದ್ಧ ಮದ್ಯ ಪ್ರಿಯರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಇನ್ನು ಮತ್ತೊಂದೆಡೆ ಹೀಗೆ ರೇಟ್ ಹೆಚ್ಚಳವಾದ್ರೆ ಮದ್ಯ ಮಾರಾಟದಲ್ಲಿ ಕುಸಿತ ಆಗುತ್ತೆ ಎಂದು ಬಾರ್ ಮಾಲೀಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಷ್ಟೃತ ದರ
ಓಟಿ(180 ಎಂಎಲ್): ಈ ಹಿಂದೆ 90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.
ಬಿಪಿ(180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.
8PM(180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ

andolanait

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

2 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

4 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

5 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

10 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

11 hours ago