ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಬರೋಬ್ಬರಿ 193 ಕೋಟಿ ಆದಾಯ ಗಳಿಕೆ ಕಂಡು ಮಂದಹಾಸ ಬೀರಿದೆ. ಇದರ ಬೆನ್ನಲ್ಲೆ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.
ಇಂದಿನಿಂದ (ಜನವರಿ ೨) ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ ಕೆಲ ಬ್ರ್ಯಾಂಡ್ಗಳ ದರ ಹೆಚ್ಚಿಸಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ.
ಈಗಾಗಲೇ 17% ರಷ್ಟು ಎಲ್ಲಾ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್ಗಳ ದರ ಹೆಚ್ಚಳ ಮಾಡಲಾಗಿದೆ. ಮದ್ಯ ಉತ್ವಾದನ ಕಂಪನಿಗಳು ಕ್ವಾಟರ್ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ. ಉತ್ಪಾದನ ವೆಚ್ಚ ಅಧಿಕವಾಗಿದೆ ಎಂದು ಮದ್ಯ ಉತ್ವನ್ನ ಕಂಪನಿಗಳು ಸಮಜಾಯಿಸಿ ನೀಡಿವೆ.
ಇಂದಿನಿಂದ ರಾಜ್ಯಾದ್ಯಂತ ಬಡವರ ಈ ಮೂರು ಫೇವರೆಟ್ ಬ್ರ್ಯಾಂಡ್ಗಳ ಮೇಲಿನ ದರ ಹೆಚ್ಚಳವಾಗಿದೆ. ಈಗಾಗಲೇ ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಸಂದೇಶ ಕಳುಹಿಸಿವೆ. ರಾಜ್ಯದ ಕೆಳ ವರ್ಗದ ಜನ ಅತಿ ಹೆಚ್ಚು ಸೇವಿಸುವ ಬ್ರ್ಯಾಂಡ್ಗಳ ದರ ಏರಿಕೆಯಾಗಿದೆ.
ಸದ್ಯ ಮದ್ಯ ಏರಿಕೆ ಹಿನ್ನೆಲೆ ಅಬಕಾರಿ ಇಲಾಖೆ ಹಾಗೂ ಕಂಪನಿಗಳ ವಿರುದ್ಧ ಮದ್ಯ ಪ್ರಿಯರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಇನ್ನು ಮತ್ತೊಂದೆಡೆ ಹೀಗೆ ರೇಟ್ ಹೆಚ್ಚಳವಾದ್ರೆ ಮದ್ಯ ಮಾರಾಟದಲ್ಲಿ ಕುಸಿತ ಆಗುತ್ತೆ ಎಂದು ಬಾರ್ ಮಾಲೀಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪರಿಷ್ಟೃತ ದರ
ಓಟಿ(180 ಎಂಎಲ್): ಈ ಹಿಂದೆ 90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.
ಬಿಪಿ(180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.
8PM(180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…