ಬೆಂಗಳೂರು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ರಾತ್ರಿ ಸಭೆ ನಡೆಸಿದ್ದಾರೆ.
ಈ ಕುರಿತು ಶನಿವಾರ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಿಗಮ ಮಂಡಳಿ ನೇಮಕ ಬಗ್ಗೆ ನಿನ್ನೆ ರಾತ್ರಿ ಒಂದು ಸುತ್ತು ಸಭೆ ನಡೆಸಿ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ನಾನು ಮತ್ತು ಮುಖ್ಯಮಂತ್ರಿಗಳು ಸೇರಿ ಒಂದು ಸುತ್ತು ಮಾತುಕತೆ ನಡೆಸಿದ್ದೇವೆ. ಮೊದಲು ಯಾರು ಯಾರಿಗೆ ಕೊಡಬೇಕೆಂದು ನಾವು ಪಟ್ಟಿ ಮಾಡಿದ್ದೇವೆ. ಹಿರಿಯ ನಾಯಕರಿಗೆ ಅವಕಾಶ ಕೊಡಬೇಕಿದೆ. ನಮ್ಮ ಪಕ್ಷದ ರಾಜ್ಯ ಉಸ್ತುವಾರಿಗಳು ಈಗ ಮಧ್ಯ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿದ್ದು, ಅವರು ಕರ್ನಾಟಕಕ್ಕೆ ಬಂದಾಗ ಅವರ ಬಳಿ ಚರ್ಚೆ ನಡೆಸಿದ ಬಳಿಕ ನಿಗಮ ಮಂಡಳಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.
ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ. ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.
ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…