ರಾಜ್ಯ

ನಿಗಮ, ಮಂಡಳಿಗಳ ನೇಮಕಕ್ಕೆ ಪಟ್ಟಿ ಸಿದ್ಧ : ಮಹತ್ವದ ಸಭೆ ನಡೆಸಿದ ಸಿದ್ದು ಡಿಕೆಶಿ

ಬೆಂಗಳೂರು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ರಾತ್ರಿ ಸಭೆ ನಡೆಸಿದ್ದಾರೆ.

ಈ ಕುರಿತು ಶನಿವಾರ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಿಗಮ ಮಂಡಳಿ ನೇಮಕ ಬಗ್ಗೆ ನಿನ್ನೆ ರಾತ್ರಿ ಒಂದು ಸುತ್ತು ಸಭೆ ನಡೆಸಿ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

ನಾನು ಮತ್ತು ಮುಖ್ಯಮಂತ್ರಿಗಳು ಸೇರಿ ಒಂದು ಸುತ್ತು ಮಾತುಕತೆ ನಡೆಸಿದ್ದೇವೆ. ಮೊದಲು ಯಾರು ಯಾರಿಗೆ ಕೊಡಬೇಕೆಂದು ನಾವು ಪಟ್ಟಿ ಮಾಡಿದ್ದೇವೆ. ಹಿರಿಯ ನಾಯಕರಿಗೆ ಅವಕಾಶ ಕೊಡಬೇಕಿದೆ. ನಮ್ಮ ಪಕ್ಷದ ರಾಜ್ಯ ಉಸ್ತುವಾರಿಗಳು ಈಗ ಮಧ್ಯ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿದ್ದು, ಅವರು ಕರ್ನಾಟಕಕ್ಕೆ ಬಂದಾಗ ಅವರ ಬಳಿ ಚರ್ಚೆ ನಡೆಸಿದ ಬಳಿಕ ನಿಗಮ ಮಂಡಳಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.

ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ. ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.

lokesh

Recent Posts

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

2 mins ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

22 mins ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

37 mins ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

1 hour ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

1 hour ago

ಕೊಡಗು | ಟೆಕ್ಕಿ ಶರಣ್ಯ ಕೊನೆಗೂ ಪತ್ತೆ

ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ…

2 hours ago