ಬೆಂಗಳೂರು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ರಾತ್ರಿ ಸಭೆ ನಡೆಸಿದ್ದಾರೆ.
ಈ ಕುರಿತು ಶನಿವಾರ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಿಗಮ ಮಂಡಳಿ ನೇಮಕ ಬಗ್ಗೆ ನಿನ್ನೆ ರಾತ್ರಿ ಒಂದು ಸುತ್ತು ಸಭೆ ನಡೆಸಿ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ನಾನು ಮತ್ತು ಮುಖ್ಯಮಂತ್ರಿಗಳು ಸೇರಿ ಒಂದು ಸುತ್ತು ಮಾತುಕತೆ ನಡೆಸಿದ್ದೇವೆ. ಮೊದಲು ಯಾರು ಯಾರಿಗೆ ಕೊಡಬೇಕೆಂದು ನಾವು ಪಟ್ಟಿ ಮಾಡಿದ್ದೇವೆ. ಹಿರಿಯ ನಾಯಕರಿಗೆ ಅವಕಾಶ ಕೊಡಬೇಕಿದೆ. ನಮ್ಮ ಪಕ್ಷದ ರಾಜ್ಯ ಉಸ್ತುವಾರಿಗಳು ಈಗ ಮಧ್ಯ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿದ್ದು, ಅವರು ಕರ್ನಾಟಕಕ್ಕೆ ಬಂದಾಗ ಅವರ ಬಳಿ ಚರ್ಚೆ ನಡೆಸಿದ ಬಳಿಕ ನಿಗಮ ಮಂಡಳಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.
ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ. ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…