ಬೆಂಗಳೂರು: ಬಿಗ್ಬಾಸ್ ಮನೆಗೆ ಬೀಗ ಜಡಿದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಾಫ್ಟ್ ಕಾರ್ನರ್ ತೋರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ, ಮಾಲಿನ್ಯ ಇಲಾಖೆಯ ಜೊತೆ ಮಾತನಾಡಿದ್ದೇನೆ. ಏನಾದರೂ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಸೂಚಿಸಿರುವುದಾಗಿ ಹೇಳಿದರು.
ಇದನ್ನು ಓದಿ : ಬಿಗ್ಬಾಸ್ ಬಂದ್ ಹಿಂದೆ ಡಿಕೆಶಿ ಕೈವಾಡವಿಲ್ಲ: ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ
ಇನ್ನು ಮುಂದುವರಿದು ಮಾತನಾಡಿದ ಅವರು, ನಾವು ವಿಚಾರಣೆ ನಡೆಸಿದ್ದೇವೆ. ಜನರಿಗೆ ಮನರಂಜನೆ ನೀಡಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿರುತ್ತಾರೆ. ಏನಾದರೂ ತಪ್ಪಾಗಿದ್ದರೂ ಅವಕಾಶ ಕೊಡಲು ಹೇಳಿದ್ದೇನೆ ಎಂದು ತಿಳಿಸಿದರು.
ಇನ್ನು ಜೆಡಿಎಸ್ನವರ ನಟ್ಟು ಬೋಲ್ಟು ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ ಶಕ್ತಿ ಬೇಕು ಅಂದಾಗ ನನ್ನ ಹೆಸರನ್ನು ತೆಗೆದುಕೊಳ್ಳುತ್ತಾರೆ. ಜಾಲಿವುಡ್ ಸ್ಟುಡಿಯೋ ಉದ್ಘಾಟನೆಯನ್ನು ನಾನೇ ಮಾಡಿದ್ದೇನೆ. ಕುಮಾರಸ್ವಾಮಿಯಾದರೂ ಆರೋಪ ಮಾಡಲಿ. ಮೇಳೆ ಇರುವವರನ್ನು ಕರೆದುಕೊಂಡು ಬಂದರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದರು.
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…