ಬೆಂಗಳೂರು: ಬಿಗ್ಬಾಸ್ ಮನೆಗೆ ಬೀಗ ಜಡಿದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಾಫ್ಟ್ ಕಾರ್ನರ್ ತೋರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ, ಮಾಲಿನ್ಯ ಇಲಾಖೆಯ ಜೊತೆ ಮಾತನಾಡಿದ್ದೇನೆ. ಏನಾದರೂ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಸೂಚಿಸಿರುವುದಾಗಿ ಹೇಳಿದರು.
ಇದನ್ನು ಓದಿ : ಬಿಗ್ಬಾಸ್ ಬಂದ್ ಹಿಂದೆ ಡಿಕೆಶಿ ಕೈವಾಡವಿಲ್ಲ: ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ
ಇನ್ನು ಮುಂದುವರಿದು ಮಾತನಾಡಿದ ಅವರು, ನಾವು ವಿಚಾರಣೆ ನಡೆಸಿದ್ದೇವೆ. ಜನರಿಗೆ ಮನರಂಜನೆ ನೀಡಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿರುತ್ತಾರೆ. ಏನಾದರೂ ತಪ್ಪಾಗಿದ್ದರೂ ಅವಕಾಶ ಕೊಡಲು ಹೇಳಿದ್ದೇನೆ ಎಂದು ತಿಳಿಸಿದರು.
ಇನ್ನು ಜೆಡಿಎಸ್ನವರ ನಟ್ಟು ಬೋಲ್ಟು ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ ಶಕ್ತಿ ಬೇಕು ಅಂದಾಗ ನನ್ನ ಹೆಸರನ್ನು ತೆಗೆದುಕೊಳ್ಳುತ್ತಾರೆ. ಜಾಲಿವುಡ್ ಸ್ಟುಡಿಯೋ ಉದ್ಘಾಟನೆಯನ್ನು ನಾನೇ ಮಾಡಿದ್ದೇನೆ. ಕುಮಾರಸ್ವಾಮಿಯಾದರೂ ಆರೋಪ ಮಾಡಲಿ. ಮೇಳೆ ಇರುವವರನ್ನು ಕರೆದುಕೊಂಡು ಬಂದರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…