ರಾಜ್ಯ

ಲೋಕಸಭೆ ಚುನಾವಣೆ ಫಲಿತಾಂಶ: ಸೋಲಿನ ಆತ್ಮಾಲೋಕನ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಲೋಕಸಭಾ ಚುನಾವಣೆಯ ಸೋಲಿನ ಬಗ್ಗೆ ಆತ್ಮವಲೋಕನ ಮಾಡಲು ಸಿಎಂ ಸಿದ್ದರಾಮಯ್ಯು ಸಭೆ ಕರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಶನಿವಾರ (ಜೂನ್ ೮) ಮೈಸೂರಿಗೆ ಆಗಮಿಸಿ ರಾತ್ರಿ ವಾಸ್ತವ್ಯ ಹೂಡಿ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಮುನ್ನಡೆ ಮತ್ತು ಕಾರ್ಯಕ್ಷಮತೆಯನ್ನು ಗಮನಿಸಿ, ಪಕ್ಷದ ಕಳಪೆ ಪ್ರದರ್ಶನಕ್ಕೆ ಕಾರಣವನ್ನು ವಿಶ್ಲೇಷಿಸಲಿದ್ದಾರೆ.

ಹಾಸನ ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಹೊರತುಪಡಿಸಿ, ಹಳೇ ಮೈಸೂರು ಭಾಗದ ಎಲ್ಲಾ ಸಚಿವರು, ಶಾಸಕರು ಮತ್ತು ಇತರ ಹಿರಿಯ ಮುಖಂಡರನ್ನು ಭೇಟಿ ಮಾಡೊ ಎಲ್ಲಿ ತಪ್ಪಾಗಿದೆ ಎಂದು ಅರಿಯಲು ಸಿಎಂ ಸಿದ್ದರಾಮಯ್ಯ ಈ ಸಭೆ ಕರೆದಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವೂ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿದೆ. ಈ ಬಗ್ಗೆಯೂ ಎಡವಿದೆಲ್ಲಿ ಎಂದು ಆತ್ಮವಲೋಕನದ ಬಗ್ಗೆ ಚರ್ಚಿಸಲಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾಂಗ್ರೆಸ್‍ನ ಎಂ.ಲಕ್ಷ್ಮಣ ವಿರುದ್ಧ 1,39,262 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಎನ್‍ಡಿಎ ಅಭ್ಯರ್ಥಿಯಾಗಿದ್ದ ರಾಜ್ಯ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‍ನ ವೆಂಕಟ್ರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಸೋಲಿಸಿದರು. ಮಂಡ್ಯದಲ್ಲಿ ಕುಮಾರಸ್ವಾಮಿ 2,84,620 ಮತಗಳ ಅಂತರದಿಂದ ಭರ್ಜರಿ ಜಯ ಗಳಿಸಿದ್ದಾರೆ.

ರಾಜ್ಯಸಭೆ, ಪರಿಷತ್ತಿನಲ್ಲಿ ಪಕ್ಷವು ಸಮುದಾಯಕ್ಕೆ ಅವಕಾಶ ನೀಡಲಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಒಕ್ಕಲಿಗರನ್ನು ಕಣಕ್ಕಿಳಿಸಲಾಗಿದ್ದರೂ ಎಲ್ಲಿ ಹಿನ್ನಡೆಯಾಯಿತು ಎಂಬ ಬಗ್ಗೆ ಸಿದ್ದರಾಮಯ್ಯ ತಮ್ಮ ನಿಷ್ಠಾವಂತ ಬೆಂಬಲಿಗರೊಂದಿಗೆ ಈಗಾಗಲೇ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

1 hour ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

4 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

6 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

6 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

6 hours ago